Advertisement
ಸುದ್ದಿಗಳು

ವಿಪರೀತ ಅಡಿಕೆ ಕಳ್ಳಸಾಗಾಣಿಕೆ | ತ್ರಿಪುರಾ-ಮಿಜೋರಾಂನಲ್ಲೂ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಒತ್ತಾಯ |

Share

ತೈವಾನ್, ಥೈಲ್ಯಾಂಡ್, ಮ್ಯಾನ್ಮಾರ್ ಮೊದಲಾದ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಗೆ ಅವ್ಯಾಹತವಾಗಿ ನಡೆಯುತ್ತಿರುವ ಕಾರಣದಿಂದ ತ್ರಿಪುರಾ ಹಾಗೂ ಮಿಜೋರಾಂ ಅಡಿಕೆ ಬೆಳೆಗಾರರಿಗೂ(Arecanut Growers)  ಈಗ ಸಂಕಷ್ಟ ಎದುರಾಗಿದೆ. ಹೀಗಾಗಿ ತಕ್ಷಣವೇ  ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಅಡಿಕೆ ಬೆಳೆಗಾರರು ಆಗ್ರಹಿಸಿದ್ದಾರೆ.

ವಿದೇಶಿ ಅಡಿಕೆಯು ಮ್ಯಾನ್ಮಾರ್‌ ಮೂಲಕ ಅಸ್ಸಾಂ ಮಾರ್ಗದಲ್ಲಿ  ಹಾಗೂ ಈಚೆಗೆ ಒಳದಾರಿಯ ಮೂಲಕ ಅಡಿಕೆ ಕಳ್ಳಸಾಗಾಟ ವಿಪರೀತವಾಗಿ ನಡೆಯುತ್ತಿದೆ. ಹೀಗಾಗಿ ತ್ರಿಪುರಾ ಮತ್ತು ಮಿಜೋರಾಂನ ಅಡಿಕೆ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಾಗಿಸಲು ಮತ್ತು ಮಾರಾಟ ಮಾಡಲು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ತ್ರಿಪುರಾ ಮತ್ತು ಮಿಜೋರಾಂನ ಕೃಷಿಕರಿಗೆ  ಅಡಿಕೆ ಪ್ರಮುಖ ಬೆಳೆಯಾಗಿದೆ. ಈಗ ಪೊಲೀಸ್‌ ದಾಳಿ ಹಾಗೂ ಕೆಲವು ಕಡೆ ಗ್ರಾಮೀಣ ಭಾಗಗಳಲ್ಲಿಯೂ ಅಕ್ರಮ ದಾಸ್ತಾನು ಕಾರಣಗಳಿಂದ ಕೃಷಿಕರ ವಸ್ತುಗಳ ಮಾರಾಟಕ್ಕೂ ಸಂಕಷ್ಟವಾಗಿದೆ. ಕೃಷಿಕರು ನಷ್ಟದತ್ತ ಮುಖ ಮಾಡುತ್ತಿದ್ದಾರೆ.  ತ್ರಿಪುರಾ ಮತ್ತು ಮಿಜೋರಾಂ ರೈತರು ಅಡಿಕೆ ಬೆಳೆಯುತ್ತಿದ್ದರೆ, ವ್ಯಾಪಾರಿಗಳು  ಖರೀದಿಸಲು ಮತ್ತು ಮಾರಾಟ ಮಾಡಲು ಸಂಕಷ್ಟ ಪಡಬೇಕಾಗಿದೆ. ಸದ್ಯ ಅಸ್ಸಾಂ ರಾಜ್ಯವನ್ನು ಬಳಸಬೇಕಾಗಿದೆ. ಆದರೆ ಸಾಗಾಟಕ್ಕೆ ಸಂಕಷ್ಟವಾಗಿದೆ. ಈ ಕಾರಣದಿಂದ ಅಡಿಕೆ ಹಾಳಾಗುವ ಸ್ಥಿತಿ ಬಂದಿದೆ. ಹೀಗಾಗಿ ಅಡಿಕೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಂಕಷ್ಟವನ್ನು ದೂರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ  ತ್ರಿಪುರಾ, ಮಿಜೋರಾಂ ಅಡಿಕೆ ಬೆಳೆಗಾರರು ತಮ್ಮ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲು ವಿವಿಧ ಪ್ರತಿಭಟನೆ, ಆಂದೋಲನ ಮಾಡಿದ್ದರು. ಸಂಬಂಧಿಸಿದ ಇಲಾಖೆ ಕೃಷಿಕರಿಗೆ ಗುರುತಿನ ಚೀಟಿ ನೀಡುತ್ತದೆ ಎಂದೂ ಹೇಳಿತ್ತು. ಆದರೆ ಯಾವುದೂ ಜಾರಿಯಾಗಿಲ್ಲ ಎಂದು ಅಡಿಕೆ ಬೆಳೆಗಾರರು ಆರೋಪಿಸಿದ್ದಾರೆ.ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಸರ್ಕಾರಗಳ ನಿಷ್ಕ್ರಿಯತೆ ಮತ್ತು ಕಾಳಜಿಯ ಕೊರತೆಯಿಂದಾಗಿ ಅಡಿಕೆ ಕೃಷಿ ಅಪಾಯವನ್ನು ಎದುರಿಸುತ್ತಿದೆ ಎಂದು ಕೃಷಿಕರು ಆರೋಪಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

23 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago