ಅಡಿಕೆ ಕೃಷಿಕರ ಸಂಕಷ್ಟ | ವ್ಯಾಪಕವಾಗಿದೆ ಅಡಿಕೆ ಕೊಳೆರೋಗ | ಭಾರೀ ಮಳೆಗೆ ನಲುಗಿದ ಅಡಿಕೆ ತೋಟ |

August 10, 2022
8:00 AM

ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಅಡಿಕೆ ಕೃಷಿಕರು ಈಗ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದೇ ತಿಂಗಳಲ್ಲಿ  ಸುಮಾರು 2500 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎಡೆಬಿಡದೆ ಸುರಿದ ಮಳೆಗೆ ಅಡಿಕೆ ಕೊಳೆರೋಗ ಆರಂಭವಾಗಿದ್ದು, ಇದೀಗ ವ್ಯಾಪಕವಾಗಿದೆ. ಅಡಿಕೆ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಾರ್ಷಿಕ ಬೆಳೆಯಾದ ಅಡಿಕೆಗೆ ಈ ಬಾರಿಯ ಮಳೆ ಹೊಡೆತ ನೀಡಿದೆ. 2018  ರಲ್ಲಿ ಉಂಟಾದ ಪರಿಸ್ಥಿತಿ ಬಹುತೇಕ ಕಡೆಗಳಲ್ಲಿ ಉಂಟಾಗಿದೆ. ಭಾರೀ ಮಳೆ, ನಿರಂತರವಾಗಿ ಸುರಿದ ಮಳೆಗೆ ಕೊಳೆರೋಗ ಆರಂಭವಾಗಿದೆ. ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಸೂಕ್ತ ಸಮಯದಲ್ಲಿ ಔಷಧಿ ಸಿಂಪಡಣೆಗೆ ಸಾಧ್ಯವಾಗದೆ ಕೃಷಿಕರು ಸೋತು ಹೋದರು. ದೋಟಿ ಸಹಾಯದಿಂದ ಅನೇಕ ಕೃಷಿಕರು ಸಾಹಸ ಮಾಡಿದರೂ ಕೊಳೆರೋಗ ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಮಲೆನಾಡು ಭಾಗದಲ್ಲಿ, ಸುಳ್ಯ, ಕಡಬ, ಬೆಳ್ತಂಗಡಿ ಮೊದಲಾದ ಕಡೆಗಳಲ್ಲಿ ನಿರಂತರವಾದ ಭಾರೀ ಮಳೆಗೆ ವಾತಾವರಣದ ಉಷ್ಣತೆಯೂ ತೀವ್ರವಾಗಿ ಇಳಿಕೆಯಾಯಿತು. ಪರಿಣಾಮವಾಗಿ ಎಲ್ಲೆಡೆಯೂ ಕೊಳೆರೋಗ ಬಾಧಿಸಿದೆ. ಈಗ ರೋಗದಿಂದ ಅಡಿಕೆ ಬೀಳುತ್ತಿದೆ. ಫಸಲು ಅರ್ಧದಷ್ಟು ನಷ್ಟವಾಗಿದೆ. ಅಡಿಕೆ ಮರದ ಬುಡ ತುಂಬೆಲ್ಲಾ ಅಡಿಕೆ ರಾಶಿ ರಾಶಿ ಬಿದ್ದಿದೆ.

ಇದೀಗ ಮತ್ತೆ ಮಳೆಯ ಆತಂಕ ಎದುರಾಗಿದೆ. ಕೆಲವು ಕಡೆ ಮಳೆಯ ಕಾರಣದಿಂದ ಒಮ್ಮೆಯೂ ಔಷಧಿ ಸಿಂಪಡಣೆ ಸಾಧ್ಯವಾಗಲಿಲ್ಲ. ಇನ್ನಷ್ಟು ಮಳೆಯಾದರೆ ಅಡಿಕೆ ಬೆಳೆಗಾರರು ಈ ಬಾರಿ ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ವಿವಿಧ ಸಂಕಷ್ಟದಿಂದ ಬಳಲುತ್ತಿರುವ ಅಡಿಕೆ ಬೆಳೆಗಾರರಿಗೆ ಮಳೆಯೂ ಶಾಕ್‌ ನೀಡಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror