ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಅಡಿಕೆ ಕೃಷಿಕರು ಈಗ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದೇ ತಿಂಗಳಲ್ಲಿ ಸುಮಾರು 2500 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎಡೆಬಿಡದೆ ಸುರಿದ ಮಳೆಗೆ ಅಡಿಕೆ ಕೊಳೆರೋಗ ಆರಂಭವಾಗಿದ್ದು, ಇದೀಗ ವ್ಯಾಪಕವಾಗಿದೆ. ಅಡಿಕೆ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಾರ್ಷಿಕ ಬೆಳೆಯಾದ ಅಡಿಕೆಗೆ ಈ ಬಾರಿಯ ಮಳೆ ಹೊಡೆತ ನೀಡಿದೆ. 2018 ರಲ್ಲಿ ಉಂಟಾದ ಪರಿಸ್ಥಿತಿ ಬಹುತೇಕ ಕಡೆಗಳಲ್ಲಿ ಉಂಟಾಗಿದೆ. ಭಾರೀ ಮಳೆ, ನಿರಂತರವಾಗಿ ಸುರಿದ ಮಳೆಗೆ ಕೊಳೆರೋಗ ಆರಂಭವಾಗಿದೆ. ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಸೂಕ್ತ ಸಮಯದಲ್ಲಿ ಔಷಧಿ ಸಿಂಪಡಣೆಗೆ ಸಾಧ್ಯವಾಗದೆ ಕೃಷಿಕರು ಸೋತು ಹೋದರು. ದೋಟಿ ಸಹಾಯದಿಂದ ಅನೇಕ ಕೃಷಿಕರು ಸಾಹಸ ಮಾಡಿದರೂ ಕೊಳೆರೋಗ ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಮಲೆನಾಡು ಭಾಗದಲ್ಲಿ, ಸುಳ್ಯ, ಕಡಬ, ಬೆಳ್ತಂಗಡಿ ಮೊದಲಾದ ಕಡೆಗಳಲ್ಲಿ ನಿರಂತರವಾದ ಭಾರೀ ಮಳೆಗೆ ವಾತಾವರಣದ ಉಷ್ಣತೆಯೂ ತೀವ್ರವಾಗಿ ಇಳಿಕೆಯಾಯಿತು. ಪರಿಣಾಮವಾಗಿ ಎಲ್ಲೆಡೆಯೂ ಕೊಳೆರೋಗ ಬಾಧಿಸಿದೆ. ಈಗ ರೋಗದಿಂದ ಅಡಿಕೆ ಬೀಳುತ್ತಿದೆ. ಫಸಲು ಅರ್ಧದಷ್ಟು ನಷ್ಟವಾಗಿದೆ. ಅಡಿಕೆ ಮರದ ಬುಡ ತುಂಬೆಲ್ಲಾ ಅಡಿಕೆ ರಾಶಿ ರಾಶಿ ಬಿದ್ದಿದೆ.
ಇದೀಗ ಮತ್ತೆ ಮಳೆಯ ಆತಂಕ ಎದುರಾಗಿದೆ. ಕೆಲವು ಕಡೆ ಮಳೆಯ ಕಾರಣದಿಂದ ಒಮ್ಮೆಯೂ ಔಷಧಿ ಸಿಂಪಡಣೆ ಸಾಧ್ಯವಾಗಲಿಲ್ಲ. ಇನ್ನಷ್ಟು ಮಳೆಯಾದರೆ ಅಡಿಕೆ ಬೆಳೆಗಾರರು ಈ ಬಾರಿ ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ವಿವಿಧ ಸಂಕಷ್ಟದಿಂದ ಬಳಲುತ್ತಿರುವ ಅಡಿಕೆ ಬೆಳೆಗಾರರಿಗೆ ಮಳೆಯೂ ಶಾಕ್ ನೀಡಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…