ಸುದ್ದಿಗಳು

ಅಡಿಕೆ ಕೃಷಿಕರ ಸಂಕಷ್ಟ | ವ್ಯಾಪಕವಾಗಿದೆ ಅಡಿಕೆ ಕೊಳೆರೋಗ | ಭಾರೀ ಮಳೆಗೆ ನಲುಗಿದ ಅಡಿಕೆ ತೋಟ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಅಡಿಕೆ ಕೃಷಿಕರು ಈಗ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದೇ ತಿಂಗಳಲ್ಲಿ  ಸುಮಾರು 2500 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎಡೆಬಿಡದೆ ಸುರಿದ ಮಳೆಗೆ ಅಡಿಕೆ ಕೊಳೆರೋಗ ಆರಂಭವಾಗಿದ್ದು, ಇದೀಗ ವ್ಯಾಪಕವಾಗಿದೆ. ಅಡಿಕೆ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

Advertisement

ವಾರ್ಷಿಕ ಬೆಳೆಯಾದ ಅಡಿಕೆಗೆ ಈ ಬಾರಿಯ ಮಳೆ ಹೊಡೆತ ನೀಡಿದೆ. 2018  ರಲ್ಲಿ ಉಂಟಾದ ಪರಿಸ್ಥಿತಿ ಬಹುತೇಕ ಕಡೆಗಳಲ್ಲಿ ಉಂಟಾಗಿದೆ. ಭಾರೀ ಮಳೆ, ನಿರಂತರವಾಗಿ ಸುರಿದ ಮಳೆಗೆ ಕೊಳೆರೋಗ ಆರಂಭವಾಗಿದೆ. ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಸೂಕ್ತ ಸಮಯದಲ್ಲಿ ಔಷಧಿ ಸಿಂಪಡಣೆಗೆ ಸಾಧ್ಯವಾಗದೆ ಕೃಷಿಕರು ಸೋತು ಹೋದರು. ದೋಟಿ ಸಹಾಯದಿಂದ ಅನೇಕ ಕೃಷಿಕರು ಸಾಹಸ ಮಾಡಿದರೂ ಕೊಳೆರೋಗ ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಮಲೆನಾಡು ಭಾಗದಲ್ಲಿ, ಸುಳ್ಯ, ಕಡಬ, ಬೆಳ್ತಂಗಡಿ ಮೊದಲಾದ ಕಡೆಗಳಲ್ಲಿ ನಿರಂತರವಾದ ಭಾರೀ ಮಳೆಗೆ ವಾತಾವರಣದ ಉಷ್ಣತೆಯೂ ತೀವ್ರವಾಗಿ ಇಳಿಕೆಯಾಯಿತು. ಪರಿಣಾಮವಾಗಿ ಎಲ್ಲೆಡೆಯೂ ಕೊಳೆರೋಗ ಬಾಧಿಸಿದೆ. ಈಗ ರೋಗದಿಂದ ಅಡಿಕೆ ಬೀಳುತ್ತಿದೆ. ಫಸಲು ಅರ್ಧದಷ್ಟು ನಷ್ಟವಾಗಿದೆ. ಅಡಿಕೆ ಮರದ ಬುಡ ತುಂಬೆಲ್ಲಾ ಅಡಿಕೆ ರಾಶಿ ರಾಶಿ ಬಿದ್ದಿದೆ.

Advertisement

ಇದೀಗ ಮತ್ತೆ ಮಳೆಯ ಆತಂಕ ಎದುರಾಗಿದೆ. ಕೆಲವು ಕಡೆ ಮಳೆಯ ಕಾರಣದಿಂದ ಒಮ್ಮೆಯೂ ಔಷಧಿ ಸಿಂಪಡಣೆ ಸಾಧ್ಯವಾಗಲಿಲ್ಲ. ಇನ್ನಷ್ಟು ಮಳೆಯಾದರೆ ಅಡಿಕೆ ಬೆಳೆಗಾರರು ಈ ಬಾರಿ ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ವಿವಿಧ ಸಂಕಷ್ಟದಿಂದ ಬಳಲುತ್ತಿರುವ ಅಡಿಕೆ ಬೆಳೆಗಾರರಿಗೆ ಮಳೆಯೂ ಶಾಕ್‌ ನೀಡಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

11 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

11 hours ago

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…

11 hours ago