Advertisement
ಸುದ್ದಿಗಳು

ಅಡಿಕೆ ಕೃಷಿಕರ ಸಂಕಷ್ಟ | ವ್ಯಾಪಕವಾಗಿದೆ ಅಡಿಕೆ ಕೊಳೆರೋಗ | ಭಾರೀ ಮಳೆಗೆ ನಲುಗಿದ ಅಡಿಕೆ ತೋಟ |

Share

ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಅಡಿಕೆ ಕೃಷಿಕರು ಈಗ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದೇ ತಿಂಗಳಲ್ಲಿ  ಸುಮಾರು 2500 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎಡೆಬಿಡದೆ ಸುರಿದ ಮಳೆಗೆ ಅಡಿಕೆ ಕೊಳೆರೋಗ ಆರಂಭವಾಗಿದ್ದು, ಇದೀಗ ವ್ಯಾಪಕವಾಗಿದೆ. ಅಡಿಕೆ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಾರ್ಷಿಕ ಬೆಳೆಯಾದ ಅಡಿಕೆಗೆ ಈ ಬಾರಿಯ ಮಳೆ ಹೊಡೆತ ನೀಡಿದೆ. 2018  ರಲ್ಲಿ ಉಂಟಾದ ಪರಿಸ್ಥಿತಿ ಬಹುತೇಕ ಕಡೆಗಳಲ್ಲಿ ಉಂಟಾಗಿದೆ. ಭಾರೀ ಮಳೆ, ನಿರಂತರವಾಗಿ ಸುರಿದ ಮಳೆಗೆ ಕೊಳೆರೋಗ ಆರಂಭವಾಗಿದೆ. ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಸೂಕ್ತ ಸಮಯದಲ್ಲಿ ಔಷಧಿ ಸಿಂಪಡಣೆಗೆ ಸಾಧ್ಯವಾಗದೆ ಕೃಷಿಕರು ಸೋತು ಹೋದರು. ದೋಟಿ ಸಹಾಯದಿಂದ ಅನೇಕ ಕೃಷಿಕರು ಸಾಹಸ ಮಾಡಿದರೂ ಕೊಳೆರೋಗ ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಮಲೆನಾಡು ಭಾಗದಲ್ಲಿ, ಸುಳ್ಯ, ಕಡಬ, ಬೆಳ್ತಂಗಡಿ ಮೊದಲಾದ ಕಡೆಗಳಲ್ಲಿ ನಿರಂತರವಾದ ಭಾರೀ ಮಳೆಗೆ ವಾತಾವರಣದ ಉಷ್ಣತೆಯೂ ತೀವ್ರವಾಗಿ ಇಳಿಕೆಯಾಯಿತು. ಪರಿಣಾಮವಾಗಿ ಎಲ್ಲೆಡೆಯೂ ಕೊಳೆರೋಗ ಬಾಧಿಸಿದೆ. ಈಗ ರೋಗದಿಂದ ಅಡಿಕೆ ಬೀಳುತ್ತಿದೆ. ಫಸಲು ಅರ್ಧದಷ್ಟು ನಷ್ಟವಾಗಿದೆ. ಅಡಿಕೆ ಮರದ ಬುಡ ತುಂಬೆಲ್ಲಾ ಅಡಿಕೆ ರಾಶಿ ರಾಶಿ ಬಿದ್ದಿದೆ.

ಇದೀಗ ಮತ್ತೆ ಮಳೆಯ ಆತಂಕ ಎದುರಾಗಿದೆ. ಕೆಲವು ಕಡೆ ಮಳೆಯ ಕಾರಣದಿಂದ ಒಮ್ಮೆಯೂ ಔಷಧಿ ಸಿಂಪಡಣೆ ಸಾಧ್ಯವಾಗಲಿಲ್ಲ. ಇನ್ನಷ್ಟು ಮಳೆಯಾದರೆ ಅಡಿಕೆ ಬೆಳೆಗಾರರು ಈ ಬಾರಿ ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ವಿವಿಧ ಸಂಕಷ್ಟದಿಂದ ಬಳಲುತ್ತಿರುವ ಅಡಿಕೆ ಬೆಳೆಗಾರರಿಗೆ ಮಳೆಯೂ ಶಾಕ್‌ ನೀಡಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

6 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

8 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

15 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

21 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago