ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಅಡಿಕೆ ಕೃಷಿಕರು ಈಗ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದೇ ತಿಂಗಳಲ್ಲಿ ಸುಮಾರು 2500 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎಡೆಬಿಡದೆ ಸುರಿದ ಮಳೆಗೆ ಅಡಿಕೆ ಕೊಳೆರೋಗ ಆರಂಭವಾಗಿದ್ದು, ಇದೀಗ ವ್ಯಾಪಕವಾಗಿದೆ. ಅಡಿಕೆ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಾರ್ಷಿಕ ಬೆಳೆಯಾದ ಅಡಿಕೆಗೆ ಈ ಬಾರಿಯ ಮಳೆ ಹೊಡೆತ ನೀಡಿದೆ. 2018 ರಲ್ಲಿ ಉಂಟಾದ ಪರಿಸ್ಥಿತಿ ಬಹುತೇಕ ಕಡೆಗಳಲ್ಲಿ ಉಂಟಾಗಿದೆ. ಭಾರೀ ಮಳೆ, ನಿರಂತರವಾಗಿ ಸುರಿದ ಮಳೆಗೆ ಕೊಳೆರೋಗ ಆರಂಭವಾಗಿದೆ. ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಸೂಕ್ತ ಸಮಯದಲ್ಲಿ ಔಷಧಿ ಸಿಂಪಡಣೆಗೆ ಸಾಧ್ಯವಾಗದೆ ಕೃಷಿಕರು ಸೋತು ಹೋದರು. ದೋಟಿ ಸಹಾಯದಿಂದ ಅನೇಕ ಕೃಷಿಕರು ಸಾಹಸ ಮಾಡಿದರೂ ಕೊಳೆರೋಗ ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಮಲೆನಾಡು ಭಾಗದಲ್ಲಿ, ಸುಳ್ಯ, ಕಡಬ, ಬೆಳ್ತಂಗಡಿ ಮೊದಲಾದ ಕಡೆಗಳಲ್ಲಿ ನಿರಂತರವಾದ ಭಾರೀ ಮಳೆಗೆ ವಾತಾವರಣದ ಉಷ್ಣತೆಯೂ ತೀವ್ರವಾಗಿ ಇಳಿಕೆಯಾಯಿತು. ಪರಿಣಾಮವಾಗಿ ಎಲ್ಲೆಡೆಯೂ ಕೊಳೆರೋಗ ಬಾಧಿಸಿದೆ. ಈಗ ರೋಗದಿಂದ ಅಡಿಕೆ ಬೀಳುತ್ತಿದೆ. ಫಸಲು ಅರ್ಧದಷ್ಟು ನಷ್ಟವಾಗಿದೆ. ಅಡಿಕೆ ಮರದ ಬುಡ ತುಂಬೆಲ್ಲಾ ಅಡಿಕೆ ರಾಶಿ ರಾಶಿ ಬಿದ್ದಿದೆ.
ಇದೀಗ ಮತ್ತೆ ಮಳೆಯ ಆತಂಕ ಎದುರಾಗಿದೆ. ಕೆಲವು ಕಡೆ ಮಳೆಯ ಕಾರಣದಿಂದ ಒಮ್ಮೆಯೂ ಔಷಧಿ ಸಿಂಪಡಣೆ ಸಾಧ್ಯವಾಗಲಿಲ್ಲ. ಇನ್ನಷ್ಟು ಮಳೆಯಾದರೆ ಅಡಿಕೆ ಬೆಳೆಗಾರರು ಈ ಬಾರಿ ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ವಿವಿಧ ಸಂಕಷ್ಟದಿಂದ ಬಳಲುತ್ತಿರುವ ಅಡಿಕೆ ಬೆಳೆಗಾರರಿಗೆ ಮಳೆಯೂ ಶಾಕ್ ನೀಡಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…