Advertisement
ಸುದ್ದಿಗಳು

ಅಡಿಕೆ ಕೃಷಿಕರ ಸಂಕಷ್ಟ | ವ್ಯಾಪಕವಾಗಿದೆ ಅಡಿಕೆ ಕೊಳೆರೋಗ | ಭಾರೀ ಮಳೆಗೆ ನಲುಗಿದ ಅಡಿಕೆ ತೋಟ |

Share

ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಅಡಿಕೆ ಕೃಷಿಕರು ಈಗ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದೇ ತಿಂಗಳಲ್ಲಿ  ಸುಮಾರು 2500 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎಡೆಬಿಡದೆ ಸುರಿದ ಮಳೆಗೆ ಅಡಿಕೆ ಕೊಳೆರೋಗ ಆರಂಭವಾಗಿದ್ದು, ಇದೀಗ ವ್ಯಾಪಕವಾಗಿದೆ. ಅಡಿಕೆ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

Advertisement

ವಾರ್ಷಿಕ ಬೆಳೆಯಾದ ಅಡಿಕೆಗೆ ಈ ಬಾರಿಯ ಮಳೆ ಹೊಡೆತ ನೀಡಿದೆ. 2018  ರಲ್ಲಿ ಉಂಟಾದ ಪರಿಸ್ಥಿತಿ ಬಹುತೇಕ ಕಡೆಗಳಲ್ಲಿ ಉಂಟಾಗಿದೆ. ಭಾರೀ ಮಳೆ, ನಿರಂತರವಾಗಿ ಸುರಿದ ಮಳೆಗೆ ಕೊಳೆರೋಗ ಆರಂಭವಾಗಿದೆ. ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಸೂಕ್ತ ಸಮಯದಲ್ಲಿ ಔಷಧಿ ಸಿಂಪಡಣೆಗೆ ಸಾಧ್ಯವಾಗದೆ ಕೃಷಿಕರು ಸೋತು ಹೋದರು. ದೋಟಿ ಸಹಾಯದಿಂದ ಅನೇಕ ಕೃಷಿಕರು ಸಾಹಸ ಮಾಡಿದರೂ ಕೊಳೆರೋಗ ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಮಲೆನಾಡು ಭಾಗದಲ್ಲಿ, ಸುಳ್ಯ, ಕಡಬ, ಬೆಳ್ತಂಗಡಿ ಮೊದಲಾದ ಕಡೆಗಳಲ್ಲಿ ನಿರಂತರವಾದ ಭಾರೀ ಮಳೆಗೆ ವಾತಾವರಣದ ಉಷ್ಣತೆಯೂ ತೀವ್ರವಾಗಿ ಇಳಿಕೆಯಾಯಿತು. ಪರಿಣಾಮವಾಗಿ ಎಲ್ಲೆಡೆಯೂ ಕೊಳೆರೋಗ ಬಾಧಿಸಿದೆ. ಈಗ ರೋಗದಿಂದ ಅಡಿಕೆ ಬೀಳುತ್ತಿದೆ. ಫಸಲು ಅರ್ಧದಷ್ಟು ನಷ್ಟವಾಗಿದೆ. ಅಡಿಕೆ ಮರದ ಬುಡ ತುಂಬೆಲ್ಲಾ ಅಡಿಕೆ ರಾಶಿ ರಾಶಿ ಬಿದ್ದಿದೆ.

ಇದೀಗ ಮತ್ತೆ ಮಳೆಯ ಆತಂಕ ಎದುರಾಗಿದೆ. ಕೆಲವು ಕಡೆ ಮಳೆಯ ಕಾರಣದಿಂದ ಒಮ್ಮೆಯೂ ಔಷಧಿ ಸಿಂಪಡಣೆ ಸಾಧ್ಯವಾಗಲಿಲ್ಲ. ಇನ್ನಷ್ಟು ಮಳೆಯಾದರೆ ಅಡಿಕೆ ಬೆಳೆಗಾರರು ಈ ಬಾರಿ ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ವಿವಿಧ ಸಂಕಷ್ಟದಿಂದ ಬಳಲುತ್ತಿರುವ ಅಡಿಕೆ ಬೆಳೆಗಾರರಿಗೆ ಮಳೆಯೂ ಶಾಕ್‌ ನೀಡಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

14 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

22 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

22 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

22 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

22 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago