ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಅಡಿಕೆ ಕೃಷಿಕರು ಈಗ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದೇ ತಿಂಗಳಲ್ಲಿ ಸುಮಾರು 2500 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಎಡೆಬಿಡದೆ ಸುರಿದ ಮಳೆಗೆ ಅಡಿಕೆ ಕೊಳೆರೋಗ ಆರಂಭವಾಗಿದ್ದು, ಇದೀಗ ವ್ಯಾಪಕವಾಗಿದೆ. ಅಡಿಕೆ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಾರ್ಷಿಕ ಬೆಳೆಯಾದ ಅಡಿಕೆಗೆ ಈ ಬಾರಿಯ ಮಳೆ ಹೊಡೆತ ನೀಡಿದೆ. 2018 ರಲ್ಲಿ ಉಂಟಾದ ಪರಿಸ್ಥಿತಿ ಬಹುತೇಕ ಕಡೆಗಳಲ್ಲಿ ಉಂಟಾಗಿದೆ. ಭಾರೀ ಮಳೆ, ನಿರಂತರವಾಗಿ ಸುರಿದ ಮಳೆಗೆ ಕೊಳೆರೋಗ ಆರಂಭವಾಗಿದೆ. ಎಡೆಬಿಡದೆ ಸುರಿದ ಮಳೆಯ ಕಾರಣದಿಂದ ಸೂಕ್ತ ಸಮಯದಲ್ಲಿ ಔಷಧಿ ಸಿಂಪಡಣೆಗೆ ಸಾಧ್ಯವಾಗದೆ ಕೃಷಿಕರು ಸೋತು ಹೋದರು. ದೋಟಿ ಸಹಾಯದಿಂದ ಅನೇಕ ಕೃಷಿಕರು ಸಾಹಸ ಮಾಡಿದರೂ ಕೊಳೆರೋಗ ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಮಲೆನಾಡು ಭಾಗದಲ್ಲಿ, ಸುಳ್ಯ, ಕಡಬ, ಬೆಳ್ತಂಗಡಿ ಮೊದಲಾದ ಕಡೆಗಳಲ್ಲಿ ನಿರಂತರವಾದ ಭಾರೀ ಮಳೆಗೆ ವಾತಾವರಣದ ಉಷ್ಣತೆಯೂ ತೀವ್ರವಾಗಿ ಇಳಿಕೆಯಾಯಿತು. ಪರಿಣಾಮವಾಗಿ ಎಲ್ಲೆಡೆಯೂ ಕೊಳೆರೋಗ ಬಾಧಿಸಿದೆ. ಈಗ ರೋಗದಿಂದ ಅಡಿಕೆ ಬೀಳುತ್ತಿದೆ. ಫಸಲು ಅರ್ಧದಷ್ಟು ನಷ್ಟವಾಗಿದೆ. ಅಡಿಕೆ ಮರದ ಬುಡ ತುಂಬೆಲ್ಲಾ ಅಡಿಕೆ ರಾಶಿ ರಾಶಿ ಬಿದ್ದಿದೆ.
ಇದೀಗ ಮತ್ತೆ ಮಳೆಯ ಆತಂಕ ಎದುರಾಗಿದೆ. ಕೆಲವು ಕಡೆ ಮಳೆಯ ಕಾರಣದಿಂದ ಒಮ್ಮೆಯೂ ಔಷಧಿ ಸಿಂಪಡಣೆ ಸಾಧ್ಯವಾಗಲಿಲ್ಲ. ಇನ್ನಷ್ಟು ಮಳೆಯಾದರೆ ಅಡಿಕೆ ಬೆಳೆಗಾರರು ಈ ಬಾರಿ ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ವಿವಿಧ ಸಂಕಷ್ಟದಿಂದ ಬಳಲುತ್ತಿರುವ ಅಡಿಕೆ ಬೆಳೆಗಾರರಿಗೆ ಮಳೆಯೂ ಶಾಕ್ ನೀಡಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…