Advertisement
MIRROR FOCUS

ಗೋಣಿ ಗೊನೆ | ಅಡಿಕೆ ಬೆಳೆಗಾರರಿಗೆ ಶ್ರಮ ಉಳಿತಾಯದ ಕೊಯ್ಲು | ಏನಿದು ಗೋಣಿ ಗೊನೆ ? |

Share

ಅಡಿಕೆ ಬೆಳೆಗಾರರಿಗೆ ಈಗ ಶ್ರಮ ಉಳಿತಾಯದ ದಾರಿಗಳ ಅಗತ್ಯವಿದೆ. ಕಾರ್ಮಿಕರ ಕೊರತೆಯ ನಡುವೆ ತಾಂತ್ರಿಕತೆ ಹಾಗೂ ನೈಪುಣ್ಯಗಳೂ ಬೇಕಾಗಿದೆ. ಅಂತಹ ನೈಪುಣ್ಯಗಳಲ್ಲಿ  ಒಂದು ಗೋಣಿ ಗೊನೆ. ಗೋಣಿ ಗೊನೆಯ ಪ್ರಾತ್ಯಕ್ಷಿಕೆ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ನಡೆದ ಅಡಿಕೆ ಕೌಶಲ್ಯ ಪಡೆ ತರಬೇತಿ ಸಂದರ್ಭ ನಡೆಯಿತು.

Advertisement
Advertisement
Advertisement
Advertisement
Advertisement
Advertisement

ಉತ್ತರ ಕನ್ನಡದ ಕೆಲವು ಭಾಗ ಹಾಗೂ ಶಿವಮೊಗ್ಗದ ಕೆಲವು ಕಡೆ ಅಡಿಕೆ ಕೊಯ್ಲು ಸಂದರ್ಭ ಗೋಣಿ ಗೊನೆಯ ಮೂಲಕ ಅಡಿಕೆ ಹಿಡಿಯುವ ಕೆಲಸ ಮಾಡಲಾಗುತ್ತದೆ. ಅಡಿಕೆ ಕೊಯ್ಲು ಮಾಡುವ ವೇಳೆ ವಿಶೇಷ ವಿನ್ಯಾಸ ಗೋಣಿಯಲ್ಲಿ  ಕೊಯ್ಲು ಮಾಡುವ ಮರದ ಕೆಳ ಭಾಗಕ್ಕೆ ಎಸೆಯಲಾಗುತ್ತದೆ. ಈ ಸಮಯದಲ್ಲಿ ಅಡಿಕೆ ಗೊನೆಯು ಗೋಣಿಗೆ ಬೀಳುವ ಮೂಲಕ ಗೋಣಿಯಲ್ಲಿಯೇ ಅಡಿಕೆ ಉಳಿಯುತ್ತದೆ. ಇದರಿಂದ ಅಡಿಕೆ ಬೆಳೆಗಾರರಿಗೆ ಶ್ರಮ ಉಳಿತಾಯವಾಗುತ್ತದೆ. ಅಡಿಕೆ ಹೆಕ್ಕುವ ಸಮಯ ಕಡಿಮೆಯಾಗುತ್ತದೆ ಎನ್ನುವುದು  ಶಿವಮೊಗ್ಗದ ಮಲೆನಾಡು ಅಡಿಕೆ ಸಮುದಾಯ ಸಂಘಟನೆಯ ಸತ್ಯನಾರಾಯಣ ಕೂಳೂರು ಹೇಳುತ್ತಾರೆ.

Advertisement

ಇದೇ ಮಾದರಿಯಲ್ಲಿ ದೊಡ್ಡದಾದ ಬುಟ್ಟಿ ಮಾದರಿಯಲ್ಲಿಯೂ ಅಡಿಕೆ ಕೊಯ್ಲು ವೇಳೆ ಅಡಿಕೆಯನ್ನು ಹಿಡಿಯುವ ಕೆಲಸ ಮಾಡುತ್ತಾರೆ. ಇದರಿಂದಲೂ ಅಡಿಕೆ ಹೆಕ್ಕುವ ಶ್ರಮ ಕಡಿಮೆಯಾಗುತ್ತದೆ ಎನ್ನುವುದು ಈ ಮಾದರಿ ಬಳಕೆ ಮಾಡುವ ಕೃಷಿಕರ ಅಭಿಪ್ರಾಯ.

Advertisement

ಇದೆರಡೂ ಮಾದರಿಗಳಲ್ಲಿ  ತಾಂತ್ರಿಕವಾದ ಮಾಹಿತಿ ಇರಬೇಕಾಗುತ್ತದೆ ಹಾಗೂ ಅಡಿಕೆ ಹಿಡಿಯುವ ಚಾಕಚಕ್ಯತೆಯೂ ಅಗತ್ಯವಾಗಿದೆ. ಆರಂಭದಲ್ಲಿ ಅಭ್ಯಾಸ ಮಾಡಿಕೊಂಡು ನಂತರ ಸಲೀಸಾಗಿ ಹಿಡಿಯಲು ಸಾಧ್ಯವಾಗುತ್ತದೆ ಎಂದು ಸತ್ಯನಾರಾಯಣ ಅವರು ಹೇಳುತ್ತಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಅಡಿಕೆ ಬೆಳೆಯುವ ಹಲವು ಪ್ರದೇಶಗಳಲ್ಲಿ  ಇಂದಿಗೂ ಅಡಿಕೆ ಎಳೆದು ಹಾಕಿದ ಬಳಿಕ ಹೆಕ್ಕುವ ಸಂಪ್ರದಾಯ ಇದೆ. ಇದರಿಂದ ಶ್ರಮ ಹೆಚ್ಚಾಗುತ್ತದೆ. ಇದಕ್ಕಾಗಿ  ಈ ಮಾದರಿ ಬಳಕೆ ಮಾಡಿದರೆ ಅಡಿಕೆ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗಲಿದೆ. ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕೃಷಿಕರ ಈ ಅಭ್ಯಾಸ ಮಾಡುತ್ತಿದ್ದಾರೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

10 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

17 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

18 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

19 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago