Advertisement
MIRROR FOCUS

ಗೋಣಿ ಗೊನೆ | ಅಡಿಕೆ ಬೆಳೆಗಾರರಿಗೆ ಶ್ರಮ ಉಳಿತಾಯದ ಕೊಯ್ಲು | ಏನಿದು ಗೋಣಿ ಗೊನೆ ? |

Share

ಅಡಿಕೆ ಬೆಳೆಗಾರರಿಗೆ ಈಗ ಶ್ರಮ ಉಳಿತಾಯದ ದಾರಿಗಳ ಅಗತ್ಯವಿದೆ. ಕಾರ್ಮಿಕರ ಕೊರತೆಯ ನಡುವೆ ತಾಂತ್ರಿಕತೆ ಹಾಗೂ ನೈಪುಣ್ಯಗಳೂ ಬೇಕಾಗಿದೆ. ಅಂತಹ ನೈಪುಣ್ಯಗಳಲ್ಲಿ  ಒಂದು ಗೋಣಿ ಗೊನೆ. ಗೋಣಿ ಗೊನೆಯ ಪ್ರಾತ್ಯಕ್ಷಿಕೆ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ನಡೆದ ಅಡಿಕೆ ಕೌಶಲ್ಯ ಪಡೆ ತರಬೇತಿ ಸಂದರ್ಭ ನಡೆಯಿತು.

ಉತ್ತರ ಕನ್ನಡದ ಕೆಲವು ಭಾಗ ಹಾಗೂ ಶಿವಮೊಗ್ಗದ ಕೆಲವು ಕಡೆ ಅಡಿಕೆ ಕೊಯ್ಲು ಸಂದರ್ಭ ಗೋಣಿ ಗೊನೆಯ ಮೂಲಕ ಅಡಿಕೆ ಹಿಡಿಯುವ ಕೆಲಸ ಮಾಡಲಾಗುತ್ತದೆ. ಅಡಿಕೆ ಕೊಯ್ಲು ಮಾಡುವ ವೇಳೆ ವಿಶೇಷ ವಿನ್ಯಾಸ ಗೋಣಿಯಲ್ಲಿ  ಕೊಯ್ಲು ಮಾಡುವ ಮರದ ಕೆಳ ಭಾಗಕ್ಕೆ ಎಸೆಯಲಾಗುತ್ತದೆ. ಈ ಸಮಯದಲ್ಲಿ ಅಡಿಕೆ ಗೊನೆಯು ಗೋಣಿಗೆ ಬೀಳುವ ಮೂಲಕ ಗೋಣಿಯಲ್ಲಿಯೇ ಅಡಿಕೆ ಉಳಿಯುತ್ತದೆ. ಇದರಿಂದ ಅಡಿಕೆ ಬೆಳೆಗಾರರಿಗೆ ಶ್ರಮ ಉಳಿತಾಯವಾಗುತ್ತದೆ. ಅಡಿಕೆ ಹೆಕ್ಕುವ ಸಮಯ ಕಡಿಮೆಯಾಗುತ್ತದೆ ಎನ್ನುವುದು  ಶಿವಮೊಗ್ಗದ ಮಲೆನಾಡು ಅಡಿಕೆ ಸಮುದಾಯ ಸಂಘಟನೆಯ ಸತ್ಯನಾರಾಯಣ ಕೂಳೂರು ಹೇಳುತ್ತಾರೆ.

ಇದೇ ಮಾದರಿಯಲ್ಲಿ ದೊಡ್ಡದಾದ ಬುಟ್ಟಿ ಮಾದರಿಯಲ್ಲಿಯೂ ಅಡಿಕೆ ಕೊಯ್ಲು ವೇಳೆ ಅಡಿಕೆಯನ್ನು ಹಿಡಿಯುವ ಕೆಲಸ ಮಾಡುತ್ತಾರೆ. ಇದರಿಂದಲೂ ಅಡಿಕೆ ಹೆಕ್ಕುವ ಶ್ರಮ ಕಡಿಮೆಯಾಗುತ್ತದೆ ಎನ್ನುವುದು ಈ ಮಾದರಿ ಬಳಕೆ ಮಾಡುವ ಕೃಷಿಕರ ಅಭಿಪ್ರಾಯ.

ಇದೆರಡೂ ಮಾದರಿಗಳಲ್ಲಿ  ತಾಂತ್ರಿಕವಾದ ಮಾಹಿತಿ ಇರಬೇಕಾಗುತ್ತದೆ ಹಾಗೂ ಅಡಿಕೆ ಹಿಡಿಯುವ ಚಾಕಚಕ್ಯತೆಯೂ ಅಗತ್ಯವಾಗಿದೆ. ಆರಂಭದಲ್ಲಿ ಅಭ್ಯಾಸ ಮಾಡಿಕೊಂಡು ನಂತರ ಸಲೀಸಾಗಿ ಹಿಡಿಯಲು ಸಾಧ್ಯವಾಗುತ್ತದೆ ಎಂದು ಸತ್ಯನಾರಾಯಣ ಅವರು ಹೇಳುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಅಡಿಕೆ ಬೆಳೆಯುವ ಹಲವು ಪ್ರದೇಶಗಳಲ್ಲಿ  ಇಂದಿಗೂ ಅಡಿಕೆ ಎಳೆದು ಹಾಕಿದ ಬಳಿಕ ಹೆಕ್ಕುವ ಸಂಪ್ರದಾಯ ಇದೆ. ಇದರಿಂದ ಶ್ರಮ ಹೆಚ್ಚಾಗುತ್ತದೆ. ಇದಕ್ಕಾಗಿ  ಈ ಮಾದರಿ ಬಳಕೆ ಮಾಡಿದರೆ ಅಡಿಕೆ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗಲಿದೆ. ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕೃಷಿಕರ ಈ ಅಭ್ಯಾಸ ಮಾಡುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 hour ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 hour ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

17 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago