Advertisement
MIRROR FOCUS

ಗೋಣಿ ಗೊನೆ | ಅಡಿಕೆ ಬೆಳೆಗಾರರಿಗೆ ಶ್ರಮ ಉಳಿತಾಯದ ಕೊಯ್ಲು | ಏನಿದು ಗೋಣಿ ಗೊನೆ ? |

Share

ಅಡಿಕೆ ಬೆಳೆಗಾರರಿಗೆ ಈಗ ಶ್ರಮ ಉಳಿತಾಯದ ದಾರಿಗಳ ಅಗತ್ಯವಿದೆ. ಕಾರ್ಮಿಕರ ಕೊರತೆಯ ನಡುವೆ ತಾಂತ್ರಿಕತೆ ಹಾಗೂ ನೈಪುಣ್ಯಗಳೂ ಬೇಕಾಗಿದೆ. ಅಂತಹ ನೈಪುಣ್ಯಗಳಲ್ಲಿ  ಒಂದು ಗೋಣಿ ಗೊನೆ. ಗೋಣಿ ಗೊನೆಯ ಪ್ರಾತ್ಯಕ್ಷಿಕೆ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ನಡೆದ ಅಡಿಕೆ ಕೌಶಲ್ಯ ಪಡೆ ತರಬೇತಿ ಸಂದರ್ಭ ನಡೆಯಿತು.

ಉತ್ತರ ಕನ್ನಡದ ಕೆಲವು ಭಾಗ ಹಾಗೂ ಶಿವಮೊಗ್ಗದ ಕೆಲವು ಕಡೆ ಅಡಿಕೆ ಕೊಯ್ಲು ಸಂದರ್ಭ ಗೋಣಿ ಗೊನೆಯ ಮೂಲಕ ಅಡಿಕೆ ಹಿಡಿಯುವ ಕೆಲಸ ಮಾಡಲಾಗುತ್ತದೆ. ಅಡಿಕೆ ಕೊಯ್ಲು ಮಾಡುವ ವೇಳೆ ವಿಶೇಷ ವಿನ್ಯಾಸ ಗೋಣಿಯಲ್ಲಿ  ಕೊಯ್ಲು ಮಾಡುವ ಮರದ ಕೆಳ ಭಾಗಕ್ಕೆ ಎಸೆಯಲಾಗುತ್ತದೆ. ಈ ಸಮಯದಲ್ಲಿ ಅಡಿಕೆ ಗೊನೆಯು ಗೋಣಿಗೆ ಬೀಳುವ ಮೂಲಕ ಗೋಣಿಯಲ್ಲಿಯೇ ಅಡಿಕೆ ಉಳಿಯುತ್ತದೆ. ಇದರಿಂದ ಅಡಿಕೆ ಬೆಳೆಗಾರರಿಗೆ ಶ್ರಮ ಉಳಿತಾಯವಾಗುತ್ತದೆ. ಅಡಿಕೆ ಹೆಕ್ಕುವ ಸಮಯ ಕಡಿಮೆಯಾಗುತ್ತದೆ ಎನ್ನುವುದು  ಶಿವಮೊಗ್ಗದ ಮಲೆನಾಡು ಅಡಿಕೆ ಸಮುದಾಯ ಸಂಘಟನೆಯ ಸತ್ಯನಾರಾಯಣ ಕೂಳೂರು ಹೇಳುತ್ತಾರೆ.

ಇದೇ ಮಾದರಿಯಲ್ಲಿ ದೊಡ್ಡದಾದ ಬುಟ್ಟಿ ಮಾದರಿಯಲ್ಲಿಯೂ ಅಡಿಕೆ ಕೊಯ್ಲು ವೇಳೆ ಅಡಿಕೆಯನ್ನು ಹಿಡಿಯುವ ಕೆಲಸ ಮಾಡುತ್ತಾರೆ. ಇದರಿಂದಲೂ ಅಡಿಕೆ ಹೆಕ್ಕುವ ಶ್ರಮ ಕಡಿಮೆಯಾಗುತ್ತದೆ ಎನ್ನುವುದು ಈ ಮಾದರಿ ಬಳಕೆ ಮಾಡುವ ಕೃಷಿಕರ ಅಭಿಪ್ರಾಯ.

ಇದೆರಡೂ ಮಾದರಿಗಳಲ್ಲಿ  ತಾಂತ್ರಿಕವಾದ ಮಾಹಿತಿ ಇರಬೇಕಾಗುತ್ತದೆ ಹಾಗೂ ಅಡಿಕೆ ಹಿಡಿಯುವ ಚಾಕಚಕ್ಯತೆಯೂ ಅಗತ್ಯವಾಗಿದೆ. ಆರಂಭದಲ್ಲಿ ಅಭ್ಯಾಸ ಮಾಡಿಕೊಂಡು ನಂತರ ಸಲೀಸಾಗಿ ಹಿಡಿಯಲು ಸಾಧ್ಯವಾಗುತ್ತದೆ ಎಂದು ಸತ್ಯನಾರಾಯಣ ಅವರು ಹೇಳುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಅಡಿಕೆ ಬೆಳೆಯುವ ಹಲವು ಪ್ರದೇಶಗಳಲ್ಲಿ  ಇಂದಿಗೂ ಅಡಿಕೆ ಎಳೆದು ಹಾಕಿದ ಬಳಿಕ ಹೆಕ್ಕುವ ಸಂಪ್ರದಾಯ ಇದೆ. ಇದರಿಂದ ಶ್ರಮ ಹೆಚ್ಚಾಗುತ್ತದೆ. ಇದಕ್ಕಾಗಿ  ಈ ಮಾದರಿ ಬಳಕೆ ಮಾಡಿದರೆ ಅಡಿಕೆ ಬೆಳೆಗಾರರಿಗೆ ಹೆಚ್ಚು ಅನುಕೂಲವಾಗಲಿದೆ. ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕೃಷಿಕರ ಈ ಅಭ್ಯಾಸ ಮಾಡುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

9 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

20 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

20 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

21 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago