ಅಡಿಕೆಗೊಂದು ಮೂಗು…..! | ಅಡಿಕೆ ಕೊಯ್ಲು ವೇಳೆ ಗಮನಿಸಬೇಕಾದ ಅಂಶ…. |

January 14, 2022
11:53 AM

ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…

ಈಚೆಗೆ ವಿಟ್ಲದ ಸಿಪಿಸಿಆರ್‌ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್‌ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್‌ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.

ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ  ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror