Advertisement
ಸುದ್ದಿಗಳು

ಅಡಿಕೆಗೊಂದು ಮೂಗು…..! | ಅಡಿಕೆ ಕೊಯ್ಲು ವೇಳೆ ಗಮನಿಸಬೇಕಾದ ಅಂಶ…. |

Share

ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…

ಈಚೆಗೆ ವಿಟ್ಲದ ಸಿಪಿಸಿಆರ್‌ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್‌ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್‌ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.

ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ  ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

3 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

11 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

18 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

19 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

1 day ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

2 days ago