ಸುದ್ದಿಗಳು

ಅಡಿಕೆಗೊಂದು ಮೂಗು…..! | ಅಡಿಕೆ ಕೊಯ್ಲು ವೇಳೆ ಗಮನಿಸಬೇಕಾದ ಅಂಶ…. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…

Advertisement
Advertisement

ಈಚೆಗೆ ವಿಟ್ಲದ ಸಿಪಿಸಿಆರ್‌ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್‌ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್‌ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.

ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ  ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

1 hour ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

5 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

5 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

6 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

1 day ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

1 day ago