ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…
ಈಚೆಗೆ ವಿಟ್ಲದ ಸಿಪಿಸಿಆರ್ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.
ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…