ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…
ಈಚೆಗೆ ವಿಟ್ಲದ ಸಿಪಿಸಿಆರ್ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.
ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…