ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ ಕೊಯ್ಲಿನ ತಾಂತ್ರಿಕ ಕೌಶಲ್ಯ ಅಡಿಕೆ ಬೆಳೆಗಾರರಿಗೂ ಅಗತ್ಯವಿದೆ. ಅಂತಹ ತಾಂತ್ರಿಕ ಮಾಹಿತಿಗಳಲ್ಲಿ ಅಡಿಕೆ ಗೊನೆಯ ಮೂಗೂ ಒಂದು. ಅದರ ವಿವರ ಇಲ್ಲಿದೆ…
ಈಚೆಗೆ ವಿಟ್ಲದ ಸಿಪಿಸಿಆರ್ ಐ ವಠಾರದಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ ಹಾಗೂ ಸಿಪಿಸಿಆರ್ಐ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಅಡಿಕೆ ಕೌಶಲ್ಯ ಪಡೆಯ ಅಡಿಕೆ ಕೊಯ್ಲು ತರಬೇತಿ ಶಿಬಿರ ನಡೆಯಿತು. ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಅದರಲ್ಲಿ ವಿಶೇಷವಾಗಿ ಅಡಿಕೆ ಕೊಯಿಲು ವೇಳೆ ಪ್ರಮುಖವಾಗಿ ಗಮನಿಸಬೇಕಾದ ಅಡಿಕೆ ಗೊನೆಯ ಮೂಗಿನ ಬಗ್ಗೆ ತರಬೇತುದಾರ ಆರ್ ಜಿ ಹೆಗಡೆ (ರಾಮಚಂದ್ರ ಹೆಗಡೆ) ಅವರು ಅಡಿಕೆ ಗೊನೆಯ ಮೂಗಿನ ಬಗ್ಗೆ ಹಾಗೂ ಕೊಯ್ಲು ಸುಲಭದ ಬಗ್ಗೆ ಮಾಹಿತಿ ನೀಡಿದರು.
ಅಡಿಕೆ ಗೊನೆಗೆ ಮೂಗು ಎಂಬುದಿದೆ. ಈಗಾಗಲೇ ಅಡಿಕೆ ಕೊಯಿಲು ಮಾಡುವ ಮಂದಿಗೆ ಈ ಬಗ್ಗೆ ಯಾವುದೇ ಮಾಹಿತಿ ಅಗತ್ಯವಿಲ್ಲ. ಆದರೆ ಹೊಸದಾಗಿ ಕಲಿಯುವ ಹಾಗೂ ಅಡಿಕೆ ಬೆಳೆಗೆ ಬಂದಿರುವ ಹೊಸದಾದ ಕೃಷಿಕರಿಗೆ ಈ ಮಾಹಿತಿಯ ಕೊರತೆ ಇದೆ. ಅಡಿಕೆ ಗೊನೆಯ ಮೂಗಿಗೆ ದೋಟಿಯನ್ನು ಅಥವಾ ಕೊಕ್ಕೆಯನ್ನು ಹಾಕಿದರೆ ಅಡಿಕೆ ಕೊಯ್ಲು ಸುಲಭವಾಗುತ್ತದೆ ಹಾಗೂ ಕತ್ತಿಯನ್ನು ಕೂಡಾ ಅಡಿಕೆ ಗೊನೆಯ ನಡುವೆ ದಾಟಿಸಲೂ ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದರು.
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…