ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್ ಫೈಬರ್ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.
ಶಿಬಿರವನ್ನು ಕೃಷಿಕ ನಿತಿನ್ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್ ಜಿ ಹೆಗಡೆ ಹಾಗೂ ರಾಜೇಶ್ ಭಟ್ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್ ಕಟ್ಟ ಮೊದಲಾದವರಿದ್ದರು.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…