ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್ ಫೈಬರ್ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.
ಶಿಬಿರವನ್ನು ಕೃಷಿಕ ನಿತಿನ್ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್ ಜಿ ಹೆಗಡೆ ಹಾಗೂ ರಾಜೇಶ್ ಭಟ್ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್ ಕಟ್ಟ ಮೊದಲಾದವರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…