ಅಡಿಕೆ ಕೊಯ್ಲು ಹಾಗೂ ಸಿಂಪಡಣೆಗೆ ಕಾರ್ಬನ್ ಫೈಬರ್ ದೋಟಿ ತರಬೇತಿ ಶಿಬಿರವು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆಯಿತು.
ಶಿಬಿರವನ್ನು ಕೃಷಿಕ ನಿತಿನ್ ಮಲ್ಲಾರ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ವಿನೂಪ್ ಮಲ್ಲಾರ ಅವರ ತೋಟದಲ್ಲಿ ನಡೆಯಿತು. ತರಬೇತುದಾರರಾಗಿ ಮೂರುರು ಕಲ್ಲಬ್ಬೆಯ ಆರ್ ಜಿ ಹೆಗಡೆ ಹಾಗೂ ರಾಜೇಶ್ ಭಟ್ ಆಗಮಿಸಿದರು. ಅಡಿಕೆ ಕೊಯ್ಲು, ಅಡಿಕೆ ಸಿಂಪಡಣೆಯು ಫೈಬರ್ ದೋಟಿಯ ಮೂಲಕ ಸೂಕ್ತವಾಗಿ ಹಾಗೂ ಸುಲಭವಾಗು ನಡೆಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು.
ಶಿಬಿರವನ್ನು ಕೃಷಿಕ ಭವಾನಿಶಂಕರ ಪಿಂಡಿಮನೆ ಹಾಗೂ ಸುರೇಂದ್ರನಾಥ ಮಲ್ಲಾರ ಉದ್ಘಾಟಿಸಿದರು. ಈ ಸಂದರ್ಭ ಕೃಷಿಕರಾದ ಹರ್ಷಕುಮಾರ್ ದೇವಜನ, ಮಣಿಕಂಠ ಕೊಳಗೆ, ಹರಿಹರ ಕೊಲ್ಲಮೊಗ್ರು ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಶೇಷಪ್ಪ ಗೌಡ, ಕೃಷಿಕ ಕೇಶವ ಭಟ್ ಕಟ್ಟ ಮೊದಲಾದವರಿದ್ದರು.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…