Advertisement
ಸುದ್ದಿಗಳು

ನೇಪಾಳದಲ್ಲಿಅಡಿಕೆ ಜೀವನದ ಭಾಗ | ನಿಯಂತ್ರಣಕ್ಕೆ ಶಾಲಾ ಶಿಕ್ಷಣ–ನೀತಿ ಕಡ್ಡಾಯ | WHO ವೆಬಿನಾರ್‌ನಲ್ಲಿ ಪ್ರೊ. ರಿಂಕಿ ಸಲಹೆ

Share

ಆಗ್ನೇಯ ಏಷ್ಯಾದಲ್ಲಿ ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಸಂಕಷ್ಟಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಆಯೋಜಿಸಿದ್ದ ವೆಬಿನಾರ್‌ನಲ್ಲಿ ನೇಪಾಳದ ಪ್ರತಿನಿಧಿ ಮಾತನಾಡಿದರು.  ನೇಪಾಳದ ಪ್ರೊಫೆಸರ್ ರಿಂಕಿ ನ್ಯಾಚ್ಹ್ಯೋನ್ ಅವರು ದೇಶವನ್ನು ಪ್ರತಿನಿಧಿಸಿ ಮಾತನಾಡಿ, “ನೇಪಾಳದಲ್ಲಿ ಜನರು ಅಡಿಕೆಯನ್ನು ಪರಂಪರೆಯ ಸಾಮಾನ್ಯ ಭಾಗವೆಂದು ಕಾಣುತ್ತಾರೆ. ಹೀಗಾಗಿ ಅದರ ಕಾರ್ಸಿನೋಜೆನಿಕ್ ಅಪಾಯದ ಅರಿವು ಬಹಳ ಕಡಿಮೆ” ಎಂದರು.ಆದರೆ, ಅಡಿಕೆ ನಿಯಂತ್ರಣಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಜಾಗೃತಿ ಮತ್ತು ಶಿಕ್ಷಣ ಕ್ರಮಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಪ್ರೊ. ರಿಂಕಿ ಅವರ ಪ್ರಕಾರ, ನೇಪಾಳದಲ್ಲಿ ತಂಬಾಕು ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳಿವೆ, ಆದರೆ ಅಡಿಕೆ ಈ ನೀತಿಯಿಂದ ಹೊರತಾಗಿದೆ.  ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ಜಾಹೀರಾತು ನಿರ್ಬಂಧ, ಭಾರೀ ತೆರಿಗೆ, ಸಾರ್ವಜನಿಕ ಸ್ಥಳದಲ್ಲಿ ಬಳಿಸಿದರೆ ಹಣದ ದಂಡ, 75% ಪಿಕ್ಟೋರಿಯಲ್ ಆರೋಗ್ಯ ಎಚ್ಚರಿಕೆ ಸಂದೇಶ ಕಡ್ಡಾಯ ಇದೆ. ಆದರೆ ಇಂತಹ ನಿಯಂತ್ರಣ ಕ್ರಮಗಳು ಅಡಿಕೆ ಉತ್ಪನ್ನಗಳ ಮೇಲೆ ಇನ್ನೂಜಾರಿಯಾಗಿಲ್ಲ ಎಂದು ಅವರು ತಿಳಿಸಿದರು.

ಅಡಿಕೆಯು ನೇಪಾಳದ ಸಂಸ್ಕೃತಿಯ ಅವಿಭಾಜ್ಯ ಭಾಗ. ಶ್ರೀಲಂಕಾದಂತೆ ನೇಪಾಳದಲ್ಲಿಯೂ ಅಡಿಕೆ ಸೇವನೆಯು ಸಾಮಾಜಿಕ ಸಭೆಗಳಲ್ಲಿ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ, ಹೋಟೆಲ್‌ಗಳಲ್ಲಿ mouth freshener ಆಗಿಯೂ ಬಳಕೆ ಇದೆ. ಪರಂಪರೆಯ ಭಾಗವಾಗಿರುವುದರಿಂದ ಜನರು ಅದನ್ನು ಅಪಾಯಕರವೆಂದು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದರು.

ನೇಪಾಳದಲ್ಲಿ ಆರೋಗ್ಯ ಮತ್ತು ಶಾಲಾ ಕಾರ್ಯಕ್ರಮ ಸೇರಿದಂತೆ ಆರೋಗ್ಯ ಕಾರ್ಯಕ್ರಮಗಳು ಬಾಯಿ ಕ್ಯಾನ್ಸರ್ ಶಿಕ್ಷಣ ಮತ್ತು ತಡೆಗೆ ಕೆಲಸ ಮಾಡುತ್ತಿವೆ.  ಆದರೆ ಈ ಎಲ್ಲ ಕಾರ್ಯಕ್ರಮಗಳು ಮುಖ್ಯವಾಗಿ ತಂಬಾಕಿನ ಅಪಾಯದತ್ತ ಮಾತ್ರ ಗಮನ ಹರಿಸುತ್ತಿವೆ. ಅಡಿಕೆ ಬಳಕೆಯು ಕೂಡ ಬಾಯಿ ಕ್ಯಾನ್ಸರ್ ಉಂಟುಮಾಡುವ ಗಂಭೀರ ಕಾರಣವೆಂದು ಈ ಕಾರ್ಯಕ್ರಮಗಳಲ್ಲಿ ಸೇರಿಸಬಹುದಾಗಿದೆ ಪ್ರೊ. ರಿಂಕಿ ಅಭಿಪ್ರಾಯಪಟ್ಟರು.

 ಪ್ರೊ. ರಿಂಕಿ ಶಿಫಾರಸು ಮಾಡಿದ ಕ್ರಮಗಳಲ್ಲಿ  ಸ್ಥಳೀಯ ಭಾಷೆಗಳಲ್ಲಿ ಜಾಗೃತಿಯನ್ನು ಮಾಡಿ ಅಡಿಕೆ ಹಾನಿಯ ಮಾಹಿತಿಯನ್ನು ಸ್ಥಳೀಯ ಭಾಷೆಗಳಲ್ಲಿ ಹರಡಬೇಕು, ಕಡಿಮೆ ಸಾಕ್ಷರತೆಯವರಿಗೂ ತಲುಪುವಂತೆ ಮಾಡಬೇಕು.  ಸಮುದಾಯ ಆರೋಗ್ಯ ಸ್ವಯಂಸೇವಕರು, ಶಿಕ್ಷಕರು ಮತ್ತು ಸ್ಥಳೀಯ ನಾಯಕರ ಮೂಲಕ ಪರಿಣಾಮಕಾರಿಯಾದ ತಡೆಯ ಸಂದೇಶ ನೀಡಬೇಕು. ಶಾಲಾ ಆರೋಗ್ಯ ಶಿಕ್ಷಣದಲ್ಲಿ ತಂಬಾಕಿನ ಜೊತೆಗೆ ಅಡಿಕೆಯ ಹಾನಿಯನ್ನೂ ಸೇರಿಸಬಹುದಾಗಿದೆ. ಅಡಿಕೆ ಉತ್ಪನ್ನಗಳು ಹಾಗೂ ಅಡಿಕೆ-ಗುಟ್ಕಾ ಮಿಶ್ರಣ ಉತ್ಪನ್ನಗಳು ಅಗ್ಗವಾಗಿ ಲಭ್ಯವಾಗಿರುವುದರಿಂದ, ಅವುಗಳ ಮಾರಾಟ ಮತ್ತು ಪ್ರಚಾರದ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಅಗತ್ಯ ಇದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಒಟ್ಟಾರೆ, ಅಡಿಕೆ ಬಳಕೆಯ ಅಪಾಯವನ್ನು ತಂಬಾಕಿನಂತೆ ಗಂಭೀರ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ಪರಿಗಣಿಸಿ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಶಾಲಾ ಶಿಕ್ಷಣದ ಮೂಲಕ ನಿಯಂತ್ರಣ ಕೈಗೊಳ್ಳಬೇಕು ಎಂದರು.  ಆದರೆ ಸಂಸ್ಕೃತಿಯ ಭಾಗವೂ ಆಗಿರುವುದರಿಂದ ಒಮ್ಮೆಲೇ ಅಡಿಕೆ ನಿಯಂತ್ರಣ ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

5 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

6 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

7 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

16 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

18 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago