MIRROR FOCUS

Arecanut | ಅಡಿಕೆ ಸಿಪ್ಪೆ ಶಬ್ದನಿರೋಧಕವಾಗಿಯೂ ಪರಿಣಾಮಕಾರಿ | ಸಂಶೋಧನಾ ವಿದ್ಯಾರ್ಥಿಗಳ ವರದಿ |

Share

ಅಡಿಕೆ ಬೆಳೆಗಾರರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅಡಿಕೆಯ ವಿವಿಧ ಬಳಕೆಯ ಬಗ್ಗೆ ಈಗಾಗಲೇ ಹಲವು ಪ್ರಯತ್ನ ನಡೆಯುತ್ತಿದೆ. ಇದೀಗ ಅಡಿಕೆ ಸಿಪ್ಪೆಯ ಬಳಕೆಯಲ್ಲಿ ಇನ್ನೊಂದು ಸಂಶೋಧನಾ ವರದಿ ಬಹಿರಂಗವಾಗಿದೆ. ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.

Advertisement

ಅಡಿಕೆ ಬೆಳೆಗಾರರು ಅಡಿಕೆಯ ಸುಲಿದ ನಂತರ ಸಿಪ್ಪೆಯನ್ನು ತ್ಯಾಜ್ಯವಾಗಿ ಬಳಕೆ ಮಾಡುತ್ತಾರೆ. ಅನೇಕರು ಬೆಂಕಿ ಹಾಕಿದರೆ, ಕೆಲವರು ಗೊಬ್ಬರವಾಗಿ ಬಳಕೆ ಮಾಡುತ್ತಾರೆ. ಗೊಬ್ಬರವಾಗಿ ಬಳಕೆ ಮಾಡುವಾಗಲೂ ಹಲವು ವಿಧಾನಗಳನ್ನು ಅನುಸರಿಸಬೇಕಿದೆ. ಅಡಿಕೆ ಸಿಪ್ಪೆಯನ್ನು ಸೊಳ್ಳೆ ನಿಯಂತ್ರಕ ಕಾಯಿಲ್‌ ಆಗಿಯೂ ಬಳಕೆ ಮಾಡುವ ಪ್ರಯತ್ನ ನಡೆದಿದೆ. ಇದೀಗ ಇನ್ನೂ ಒಂದು ಅಧ್ಯಯನ ನಡೆದಿದೆ, ಆಡಿಟೋರಿಯಂ ಅಥವಾ ಮೀಟಿಂಗ್ ಹಾಲ್​ನಲ್ಲಿ ಬರುವ ಅನಗತ್ಯ ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ  ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NITK) ಸಂಶೋಧನಾ ವಿದ್ಯಾರ್ಥಿಗಳು  ನಡೆಸಿದ ಸಂಶೋಧನೆಯಿಂದ ಬಹಿರಂಗವಾಗಿದೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊ.ಪಿ.ಜಯರಾಜ್ ನೇತೃತ್ವದ ಸಂಶೋಧಕರು ಈ ಸಂಶೋಧನೆಯನ್ನು ನಡೆಸಿದ್ದಾರೆ. ಶಬ್ದ ನಿರೋಧಕ ಬೋರ್ಡ್​​ಗಳನ್ನು ರಚಿಸುವ ಮೂಲಕ ಶಬ್ದ ನಿರೋಧಕವಾಗಿ ಬಳಕೆ ಮಾಡಬಹುದು ಎಂದು ವರದಿಯಲ್ಲಿ ತಿಳಿಸಿದ್ದಾರೆ. ಅನಗತ್ಯ ಶಬ್ದವನ್ನು ನಿಯಂತ್ರಿಸಲು ಶಬ್ದ ಹೀರಿಕೊಳ್ಳುವ ವಸ್ತುಗಳನ್ನು ಬಳಸಲಾಗುತ್ತದೆ. ಈಗ ಪ್ಲಾಸ್ಟಿಕ್‌ ವಸ್ತುಗಳನ್ನು, ಮಡಕೆ, ಬೋರ್ಡ್‌ ಇತ್ಯಾದಿಗಳ ಬಳಕೆ ಮಾಡಲಾಗುತ್ತದೆ. ಆದರೆ ಅಡಿಕೆಯ ಸಿಪ್ಪೆ ಪರಿಸರ ಸ್ನೇಹಿಯೂ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಎನ್ನುವುದು ವರದಿ.

“ಶಬ್ದ ಫಲಕಗಳನ್ನು ಹೆಚ್ಚು ಪರಿಸರ ಸ್ನೇಹಿ ಮತ್ತು ಜೈವಿಕ ಸಂಯೋಜನೆಯನ್ನಾಗಿ ಮಾಡಲು, ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಒಳಗೊಂಡ ತಂಡವು ಅಡಿಕೆ ಹೊಟ್ಟನ್ನು ಅನ್ವೇಷಿಸಲು ಪ್ರಾರಂಭಿಸಿತು. ಅದರಂತೆ ಫಲಿತಾಂಶವು ಸಕಾರಾತ್ಮಕವಾಗಿ ಬಂದಿದೆ” ಎಂದು ಜಯರಾಜ್ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

5 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

5 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

15 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

16 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

16 hours ago