Advertisement
MIRROR FOCUS

Arecanut | ಅಡಿಕೆ ಸಿಪ್ಪೆ ಶಬ್ದನಿರೋಧಕವಾಗಿಯೂ ಪರಿಣಾಮಕಾರಿ | ಸಂಶೋಧನಾ ವಿದ್ಯಾರ್ಥಿಗಳ ವರದಿ |

Share

ಅಡಿಕೆ ಬೆಳೆಗಾರರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅಡಿಕೆಯ ವಿವಿಧ ಬಳಕೆಯ ಬಗ್ಗೆ ಈಗಾಗಲೇ ಹಲವು ಪ್ರಯತ್ನ ನಡೆಯುತ್ತಿದೆ. ಇದೀಗ ಅಡಿಕೆ ಸಿಪ್ಪೆಯ ಬಳಕೆಯಲ್ಲಿ ಇನ್ನೊಂದು ಸಂಶೋಧನಾ ವರದಿ ಬಹಿರಂಗವಾಗಿದೆ. ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.

Advertisement
Advertisement
Advertisement
Advertisement

ಅಡಿಕೆ ಬೆಳೆಗಾರರು ಅಡಿಕೆಯ ಸುಲಿದ ನಂತರ ಸಿಪ್ಪೆಯನ್ನು ತ್ಯಾಜ್ಯವಾಗಿ ಬಳಕೆ ಮಾಡುತ್ತಾರೆ. ಅನೇಕರು ಬೆಂಕಿ ಹಾಕಿದರೆ, ಕೆಲವರು ಗೊಬ್ಬರವಾಗಿ ಬಳಕೆ ಮಾಡುತ್ತಾರೆ. ಗೊಬ್ಬರವಾಗಿ ಬಳಕೆ ಮಾಡುವಾಗಲೂ ಹಲವು ವಿಧಾನಗಳನ್ನು ಅನುಸರಿಸಬೇಕಿದೆ. ಅಡಿಕೆ ಸಿಪ್ಪೆಯನ್ನು ಸೊಳ್ಳೆ ನಿಯಂತ್ರಕ ಕಾಯಿಲ್‌ ಆಗಿಯೂ ಬಳಕೆ ಮಾಡುವ ಪ್ರಯತ್ನ ನಡೆದಿದೆ. ಇದೀಗ ಇನ್ನೂ ಒಂದು ಅಧ್ಯಯನ ನಡೆದಿದೆ, ಆಡಿಟೋರಿಯಂ ಅಥವಾ ಮೀಟಿಂಗ್ ಹಾಲ್​ನಲ್ಲಿ ಬರುವ ಅನಗತ್ಯ ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ  ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NITK) ಸಂಶೋಧನಾ ವಿದ್ಯಾರ್ಥಿಗಳು  ನಡೆಸಿದ ಸಂಶೋಧನೆಯಿಂದ ಬಹಿರಂಗವಾಗಿದೆ.

Advertisement

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊ.ಪಿ.ಜಯರಾಜ್ ನೇತೃತ್ವದ ಸಂಶೋಧಕರು ಈ ಸಂಶೋಧನೆಯನ್ನು ನಡೆಸಿದ್ದಾರೆ. ಶಬ್ದ ನಿರೋಧಕ ಬೋರ್ಡ್​​ಗಳನ್ನು ರಚಿಸುವ ಮೂಲಕ ಶಬ್ದ ನಿರೋಧಕವಾಗಿ ಬಳಕೆ ಮಾಡಬಹುದು ಎಂದು ವರದಿಯಲ್ಲಿ ತಿಳಿಸಿದ್ದಾರೆ. ಅನಗತ್ಯ ಶಬ್ದವನ್ನು ನಿಯಂತ್ರಿಸಲು ಶಬ್ದ ಹೀರಿಕೊಳ್ಳುವ ವಸ್ತುಗಳನ್ನು ಬಳಸಲಾಗುತ್ತದೆ. ಈಗ ಪ್ಲಾಸ್ಟಿಕ್‌ ವಸ್ತುಗಳನ್ನು, ಮಡಕೆ, ಬೋರ್ಡ್‌ ಇತ್ಯಾದಿಗಳ ಬಳಕೆ ಮಾಡಲಾಗುತ್ತದೆ. ಆದರೆ ಅಡಿಕೆಯ ಸಿಪ್ಪೆ ಪರಿಸರ ಸ್ನೇಹಿಯೂ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಎನ್ನುವುದು ವರದಿ.

“ಶಬ್ದ ಫಲಕಗಳನ್ನು ಹೆಚ್ಚು ಪರಿಸರ ಸ್ನೇಹಿ ಮತ್ತು ಜೈವಿಕ ಸಂಯೋಜನೆಯನ್ನಾಗಿ ಮಾಡಲು, ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಒಳಗೊಂಡ ತಂಡವು ಅಡಿಕೆ ಹೊಟ್ಟನ್ನು ಅನ್ವೇಷಿಸಲು ಪ್ರಾರಂಭಿಸಿತು. ಅದರಂತೆ ಫಲಿತಾಂಶವು ಸಕಾರಾತ್ಮಕವಾಗಿ ಬಂದಿದೆ” ಎಂದು ಜಯರಾಜ್ ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

21 seconds ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

6 mins ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago