MIRROR FOCUS

Arecanut | ಅಡಿಕೆ ಸಿಪ್ಪೆ ಶಬ್ದನಿರೋಧಕವಾಗಿಯೂ ಪರಿಣಾಮಕಾರಿ | ಸಂಶೋಧನಾ ವಿದ್ಯಾರ್ಥಿಗಳ ವರದಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಬೆಳೆಗಾರರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅಡಿಕೆಯ ವಿವಿಧ ಬಳಕೆಯ ಬಗ್ಗೆ ಈಗಾಗಲೇ ಹಲವು ಪ್ರಯತ್ನ ನಡೆಯುತ್ತಿದೆ. ಇದೀಗ ಅಡಿಕೆ ಸಿಪ್ಪೆಯ ಬಳಕೆಯಲ್ಲಿ ಇನ್ನೊಂದು ಸಂಶೋಧನಾ ವರದಿ ಬಹಿರಂಗವಾಗಿದೆ. ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.

Advertisement
Advertisement

ಅಡಿಕೆ ಬೆಳೆಗಾರರು ಅಡಿಕೆಯ ಸುಲಿದ ನಂತರ ಸಿಪ್ಪೆಯನ್ನು ತ್ಯಾಜ್ಯವಾಗಿ ಬಳಕೆ ಮಾಡುತ್ತಾರೆ. ಅನೇಕರು ಬೆಂಕಿ ಹಾಕಿದರೆ, ಕೆಲವರು ಗೊಬ್ಬರವಾಗಿ ಬಳಕೆ ಮಾಡುತ್ತಾರೆ. ಗೊಬ್ಬರವಾಗಿ ಬಳಕೆ ಮಾಡುವಾಗಲೂ ಹಲವು ವಿಧಾನಗಳನ್ನು ಅನುಸರಿಸಬೇಕಿದೆ. ಅಡಿಕೆ ಸಿಪ್ಪೆಯನ್ನು ಸೊಳ್ಳೆ ನಿಯಂತ್ರಕ ಕಾಯಿಲ್‌ ಆಗಿಯೂ ಬಳಕೆ ಮಾಡುವ ಪ್ರಯತ್ನ ನಡೆದಿದೆ. ಇದೀಗ ಇನ್ನೂ ಒಂದು ಅಧ್ಯಯನ ನಡೆದಿದೆ, ಆಡಿಟೋರಿಯಂ ಅಥವಾ ಮೀಟಿಂಗ್ ಹಾಲ್​ನಲ್ಲಿ ಬರುವ ಅನಗತ್ಯ ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ  ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NITK) ಸಂಶೋಧನಾ ವಿದ್ಯಾರ್ಥಿಗಳು  ನಡೆಸಿದ ಸಂಶೋಧನೆಯಿಂದ ಬಹಿರಂಗವಾಗಿದೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊ.ಪಿ.ಜಯರಾಜ್ ನೇತೃತ್ವದ ಸಂಶೋಧಕರು ಈ ಸಂಶೋಧನೆಯನ್ನು ನಡೆಸಿದ್ದಾರೆ. ಶಬ್ದ ನಿರೋಧಕ ಬೋರ್ಡ್​​ಗಳನ್ನು ರಚಿಸುವ ಮೂಲಕ ಶಬ್ದ ನಿರೋಧಕವಾಗಿ ಬಳಕೆ ಮಾಡಬಹುದು ಎಂದು ವರದಿಯಲ್ಲಿ ತಿಳಿಸಿದ್ದಾರೆ. ಅನಗತ್ಯ ಶಬ್ದವನ್ನು ನಿಯಂತ್ರಿಸಲು ಶಬ್ದ ಹೀರಿಕೊಳ್ಳುವ ವಸ್ತುಗಳನ್ನು ಬಳಸಲಾಗುತ್ತದೆ. ಈಗ ಪ್ಲಾಸ್ಟಿಕ್‌ ವಸ್ತುಗಳನ್ನು, ಮಡಕೆ, ಬೋರ್ಡ್‌ ಇತ್ಯಾದಿಗಳ ಬಳಕೆ ಮಾಡಲಾಗುತ್ತದೆ. ಆದರೆ ಅಡಿಕೆಯ ಸಿಪ್ಪೆ ಪರಿಸರ ಸ್ನೇಹಿಯೂ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಎನ್ನುವುದು ವರದಿ.

“ಶಬ್ದ ಫಲಕಗಳನ್ನು ಹೆಚ್ಚು ಪರಿಸರ ಸ್ನೇಹಿ ಮತ್ತು ಜೈವಿಕ ಸಂಯೋಜನೆಯನ್ನಾಗಿ ಮಾಡಲು, ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಒಳಗೊಂಡ ತಂಡವು ಅಡಿಕೆ ಹೊಟ್ಟನ್ನು ಅನ್ವೇಷಿಸಲು ಪ್ರಾರಂಭಿಸಿತು. ಅದರಂತೆ ಫಲಿತಾಂಶವು ಸಕಾರಾತ್ಮಕವಾಗಿ ಬಂದಿದೆ” ಎಂದು ಜಯರಾಜ್ ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್‌…

14 minutes ago

ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ

ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ…

55 minutes ago

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…

6 hours ago

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

13 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

14 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

14 hours ago