Advertisement
MIRROR FOCUS

Arecanut | ಅಡಿಕೆ ಸಿಪ್ಪೆ ಶಬ್ದನಿರೋಧಕವಾಗಿಯೂ ಪರಿಣಾಮಕಾರಿ | ಸಂಶೋಧನಾ ವಿದ್ಯಾರ್ಥಿಗಳ ವರದಿ |

Share

ಅಡಿಕೆ ಬೆಳೆಗಾರರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅಡಿಕೆಯ ವಿವಿಧ ಬಳಕೆಯ ಬಗ್ಗೆ ಈಗಾಗಲೇ ಹಲವು ಪ್ರಯತ್ನ ನಡೆಯುತ್ತಿದೆ. ಇದೀಗ ಅಡಿಕೆ ಸಿಪ್ಪೆಯ ಬಳಕೆಯಲ್ಲಿ ಇನ್ನೊಂದು ಸಂಶೋಧನಾ ವರದಿ ಬಹಿರಂಗವಾಗಿದೆ. ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.

ಅಡಿಕೆ ಬೆಳೆಗಾರರು ಅಡಿಕೆಯ ಸುಲಿದ ನಂತರ ಸಿಪ್ಪೆಯನ್ನು ತ್ಯಾಜ್ಯವಾಗಿ ಬಳಕೆ ಮಾಡುತ್ತಾರೆ. ಅನೇಕರು ಬೆಂಕಿ ಹಾಕಿದರೆ, ಕೆಲವರು ಗೊಬ್ಬರವಾಗಿ ಬಳಕೆ ಮಾಡುತ್ತಾರೆ. ಗೊಬ್ಬರವಾಗಿ ಬಳಕೆ ಮಾಡುವಾಗಲೂ ಹಲವು ವಿಧಾನಗಳನ್ನು ಅನುಸರಿಸಬೇಕಿದೆ. ಅಡಿಕೆ ಸಿಪ್ಪೆಯನ್ನು ಸೊಳ್ಳೆ ನಿಯಂತ್ರಕ ಕಾಯಿಲ್‌ ಆಗಿಯೂ ಬಳಕೆ ಮಾಡುವ ಪ್ರಯತ್ನ ನಡೆದಿದೆ. ಇದೀಗ ಇನ್ನೂ ಒಂದು ಅಧ್ಯಯನ ನಡೆದಿದೆ, ಆಡಿಟೋರಿಯಂ ಅಥವಾ ಮೀಟಿಂಗ್ ಹಾಲ್​ನಲ್ಲಿ ಬರುವ ಅನಗತ್ಯ ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ  ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NITK) ಸಂಶೋಧನಾ ವಿದ್ಯಾರ್ಥಿಗಳು  ನಡೆಸಿದ ಸಂಶೋಧನೆಯಿಂದ ಬಹಿರಂಗವಾಗಿದೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊ.ಪಿ.ಜಯರಾಜ್ ನೇತೃತ್ವದ ಸಂಶೋಧಕರು ಈ ಸಂಶೋಧನೆಯನ್ನು ನಡೆಸಿದ್ದಾರೆ. ಶಬ್ದ ನಿರೋಧಕ ಬೋರ್ಡ್​​ಗಳನ್ನು ರಚಿಸುವ ಮೂಲಕ ಶಬ್ದ ನಿರೋಧಕವಾಗಿ ಬಳಕೆ ಮಾಡಬಹುದು ಎಂದು ವರದಿಯಲ್ಲಿ ತಿಳಿಸಿದ್ದಾರೆ. ಅನಗತ್ಯ ಶಬ್ದವನ್ನು ನಿಯಂತ್ರಿಸಲು ಶಬ್ದ ಹೀರಿಕೊಳ್ಳುವ ವಸ್ತುಗಳನ್ನು ಬಳಸಲಾಗುತ್ತದೆ. ಈಗ ಪ್ಲಾಸ್ಟಿಕ್‌ ವಸ್ತುಗಳನ್ನು, ಮಡಕೆ, ಬೋರ್ಡ್‌ ಇತ್ಯಾದಿಗಳ ಬಳಕೆ ಮಾಡಲಾಗುತ್ತದೆ. ಆದರೆ ಅಡಿಕೆಯ ಸಿಪ್ಪೆ ಪರಿಸರ ಸ್ನೇಹಿಯೂ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಎನ್ನುವುದು ವರದಿ.

“ಶಬ್ದ ಫಲಕಗಳನ್ನು ಹೆಚ್ಚು ಪರಿಸರ ಸ್ನೇಹಿ ಮತ್ತು ಜೈವಿಕ ಸಂಯೋಜನೆಯನ್ನಾಗಿ ಮಾಡಲು, ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಒಳಗೊಂಡ ತಂಡವು ಅಡಿಕೆ ಹೊಟ್ಟನ್ನು ಅನ್ವೇಷಿಸಲು ಪ್ರಾರಂಭಿಸಿತು. ಅದರಂತೆ ಫಲಿತಾಂಶವು ಸಕಾರಾತ್ಮಕವಾಗಿ ಬಂದಿದೆ” ಎಂದು ಜಯರಾಜ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

3 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

7 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

19 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

20 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

20 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

21 hours ago