Advertisement
MIRROR FOCUS

Arecanut | ಅಡಿಕೆ ಸಿಪ್ಪೆ ಶಬ್ದನಿರೋಧಕವಾಗಿಯೂ ಪರಿಣಾಮಕಾರಿ | ಸಂಶೋಧನಾ ವಿದ್ಯಾರ್ಥಿಗಳ ವರದಿ |

Share

ಅಡಿಕೆ ಬೆಳೆಗಾರರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅಡಿಕೆಯ ವಿವಿಧ ಬಳಕೆಯ ಬಗ್ಗೆ ಈಗಾಗಲೇ ಹಲವು ಪ್ರಯತ್ನ ನಡೆಯುತ್ತಿದೆ. ಇದೀಗ ಅಡಿಕೆ ಸಿಪ್ಪೆಯ ಬಳಕೆಯಲ್ಲಿ ಇನ್ನೊಂದು ಸಂಶೋಧನಾ ವರದಿ ಬಹಿರಂಗವಾಗಿದೆ. ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.

ಅಡಿಕೆ ಬೆಳೆಗಾರರು ಅಡಿಕೆಯ ಸುಲಿದ ನಂತರ ಸಿಪ್ಪೆಯನ್ನು ತ್ಯಾಜ್ಯವಾಗಿ ಬಳಕೆ ಮಾಡುತ್ತಾರೆ. ಅನೇಕರು ಬೆಂಕಿ ಹಾಕಿದರೆ, ಕೆಲವರು ಗೊಬ್ಬರವಾಗಿ ಬಳಕೆ ಮಾಡುತ್ತಾರೆ. ಗೊಬ್ಬರವಾಗಿ ಬಳಕೆ ಮಾಡುವಾಗಲೂ ಹಲವು ವಿಧಾನಗಳನ್ನು ಅನುಸರಿಸಬೇಕಿದೆ. ಅಡಿಕೆ ಸಿಪ್ಪೆಯನ್ನು ಸೊಳ್ಳೆ ನಿಯಂತ್ರಕ ಕಾಯಿಲ್‌ ಆಗಿಯೂ ಬಳಕೆ ಮಾಡುವ ಪ್ರಯತ್ನ ನಡೆದಿದೆ. ಇದೀಗ ಇನ್ನೂ ಒಂದು ಅಧ್ಯಯನ ನಡೆದಿದೆ, ಆಡಿಟೋರಿಯಂ ಅಥವಾ ಮೀಟಿಂಗ್ ಹಾಲ್​ನಲ್ಲಿ ಬರುವ ಅನಗತ್ಯ ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ  ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NITK) ಸಂಶೋಧನಾ ವಿದ್ಯಾರ್ಥಿಗಳು  ನಡೆಸಿದ ಸಂಶೋಧನೆಯಿಂದ ಬಹಿರಂಗವಾಗಿದೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊ.ಪಿ.ಜಯರಾಜ್ ನೇತೃತ್ವದ ಸಂಶೋಧಕರು ಈ ಸಂಶೋಧನೆಯನ್ನು ನಡೆಸಿದ್ದಾರೆ. ಶಬ್ದ ನಿರೋಧಕ ಬೋರ್ಡ್​​ಗಳನ್ನು ರಚಿಸುವ ಮೂಲಕ ಶಬ್ದ ನಿರೋಧಕವಾಗಿ ಬಳಕೆ ಮಾಡಬಹುದು ಎಂದು ವರದಿಯಲ್ಲಿ ತಿಳಿಸಿದ್ದಾರೆ. ಅನಗತ್ಯ ಶಬ್ದವನ್ನು ನಿಯಂತ್ರಿಸಲು ಶಬ್ದ ಹೀರಿಕೊಳ್ಳುವ ವಸ್ತುಗಳನ್ನು ಬಳಸಲಾಗುತ್ತದೆ. ಈಗ ಪ್ಲಾಸ್ಟಿಕ್‌ ವಸ್ತುಗಳನ್ನು, ಮಡಕೆ, ಬೋರ್ಡ್‌ ಇತ್ಯಾದಿಗಳ ಬಳಕೆ ಮಾಡಲಾಗುತ್ತದೆ. ಆದರೆ ಅಡಿಕೆಯ ಸಿಪ್ಪೆ ಪರಿಸರ ಸ್ನೇಹಿಯೂ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಎನ್ನುವುದು ವರದಿ.

“ಶಬ್ದ ಫಲಕಗಳನ್ನು ಹೆಚ್ಚು ಪರಿಸರ ಸ್ನೇಹಿ ಮತ್ತು ಜೈವಿಕ ಸಂಯೋಜನೆಯನ್ನಾಗಿ ಮಾಡಲು, ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಒಳಗೊಂಡ ತಂಡವು ಅಡಿಕೆ ಹೊಟ್ಟನ್ನು ಅನ್ವೇಷಿಸಲು ಪ್ರಾರಂಭಿಸಿತು. ಅದರಂತೆ ಫಲಿತಾಂಶವು ಸಕಾರಾತ್ಮಕವಾಗಿ ಬಂದಿದೆ” ಎಂದು ಜಯರಾಜ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

3 minutes ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

4 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

12 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

14 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

15 hours ago