Advertisement
MIRROR FOCUS

Arecanut | ಅಡಿಕೆ ಸಿಪ್ಪೆ ಶಬ್ದನಿರೋಧಕವಾಗಿಯೂ ಪರಿಣಾಮಕಾರಿ | ಸಂಶೋಧನಾ ವಿದ್ಯಾರ್ಥಿಗಳ ವರದಿ |

Share

ಅಡಿಕೆ ಬೆಳೆಗಾರರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅಡಿಕೆಯ ವಿವಿಧ ಬಳಕೆಯ ಬಗ್ಗೆ ಈಗಾಗಲೇ ಹಲವು ಪ್ರಯತ್ನ ನಡೆಯುತ್ತಿದೆ. ಇದೀಗ ಅಡಿಕೆ ಸಿಪ್ಪೆಯ ಬಳಕೆಯಲ್ಲಿ ಇನ್ನೊಂದು ಸಂಶೋಧನಾ ವರದಿ ಬಹಿರಂಗವಾಗಿದೆ. ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.

ಅಡಿಕೆ ಬೆಳೆಗಾರರು ಅಡಿಕೆಯ ಸುಲಿದ ನಂತರ ಸಿಪ್ಪೆಯನ್ನು ತ್ಯಾಜ್ಯವಾಗಿ ಬಳಕೆ ಮಾಡುತ್ತಾರೆ. ಅನೇಕರು ಬೆಂಕಿ ಹಾಕಿದರೆ, ಕೆಲವರು ಗೊಬ್ಬರವಾಗಿ ಬಳಕೆ ಮಾಡುತ್ತಾರೆ. ಗೊಬ್ಬರವಾಗಿ ಬಳಕೆ ಮಾಡುವಾಗಲೂ ಹಲವು ವಿಧಾನಗಳನ್ನು ಅನುಸರಿಸಬೇಕಿದೆ. ಅಡಿಕೆ ಸಿಪ್ಪೆಯನ್ನು ಸೊಳ್ಳೆ ನಿಯಂತ್ರಕ ಕಾಯಿಲ್‌ ಆಗಿಯೂ ಬಳಕೆ ಮಾಡುವ ಪ್ರಯತ್ನ ನಡೆದಿದೆ. ಇದೀಗ ಇನ್ನೂ ಒಂದು ಅಧ್ಯಯನ ನಡೆದಿದೆ, ಆಡಿಟೋರಿಯಂ ಅಥವಾ ಮೀಟಿಂಗ್ ಹಾಲ್​ನಲ್ಲಿ ಬರುವ ಅನಗತ್ಯ ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ  ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NITK) ಸಂಶೋಧನಾ ವಿದ್ಯಾರ್ಥಿಗಳು  ನಡೆಸಿದ ಸಂಶೋಧನೆಯಿಂದ ಬಹಿರಂಗವಾಗಿದೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊ.ಪಿ.ಜಯರಾಜ್ ನೇತೃತ್ವದ ಸಂಶೋಧಕರು ಈ ಸಂಶೋಧನೆಯನ್ನು ನಡೆಸಿದ್ದಾರೆ. ಶಬ್ದ ನಿರೋಧಕ ಬೋರ್ಡ್​​ಗಳನ್ನು ರಚಿಸುವ ಮೂಲಕ ಶಬ್ದ ನಿರೋಧಕವಾಗಿ ಬಳಕೆ ಮಾಡಬಹುದು ಎಂದು ವರದಿಯಲ್ಲಿ ತಿಳಿಸಿದ್ದಾರೆ. ಅನಗತ್ಯ ಶಬ್ದವನ್ನು ನಿಯಂತ್ರಿಸಲು ಶಬ್ದ ಹೀರಿಕೊಳ್ಳುವ ವಸ್ತುಗಳನ್ನು ಬಳಸಲಾಗುತ್ತದೆ. ಈಗ ಪ್ಲಾಸ್ಟಿಕ್‌ ವಸ್ತುಗಳನ್ನು, ಮಡಕೆ, ಬೋರ್ಡ್‌ ಇತ್ಯಾದಿಗಳ ಬಳಕೆ ಮಾಡಲಾಗುತ್ತದೆ. ಆದರೆ ಅಡಿಕೆಯ ಸಿಪ್ಪೆ ಪರಿಸರ ಸ್ನೇಹಿಯೂ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಎನ್ನುವುದು ವರದಿ.

“ಶಬ್ದ ಫಲಕಗಳನ್ನು ಹೆಚ್ಚು ಪರಿಸರ ಸ್ನೇಹಿ ಮತ್ತು ಜೈವಿಕ ಸಂಯೋಜನೆಯನ್ನಾಗಿ ಮಾಡಲು, ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಒಳಗೊಂಡ ತಂಡವು ಅಡಿಕೆ ಹೊಟ್ಟನ್ನು ಅನ್ವೇಷಿಸಲು ಪ್ರಾರಂಭಿಸಿತು. ಅದರಂತೆ ಫಲಿತಾಂಶವು ಸಕಾರಾತ್ಮಕವಾಗಿ ಬಂದಿದೆ” ಎಂದು ಜಯರಾಜ್ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

1 day ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago