Advertisement
ಪ್ರಮುಖ

ಗ್ರಾಮೀಣ ಆರ್ಥಿಕತೆಗೆ ಬಲ ನೀಡುವ ಅಡಿಕೆ ಸಿಪ್ಪೆ…! ಸಂಶೋಧನಾ ವರದಿ

Share

ಅಡಿಕೆ ಸಂಸ್ಕರಣೆಯ ನಂತರ ಉಳಿಯುವ ಅಡಿಕೆ ಸಿಪ್ಪೆ (Arecanut husk) ಇದುವರೆಗೆ ಬಹುತೇಕ ಕೃಷಿ ತ್ಯಾಜ್ಯವೆಂದು ಪರಿಗಣಿಸಲಾಗುತ್ತಿತ್ತು. ಆದರೆ ಇತ್ತೀಚಿನ ಸಂಶೋಧನೆಗಳು ಹಾಗೂ ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ, ಈ ತ್ಯಾಜ್ಯವೇ ಇದೀಗ ಜೈವಿಕ ಉತ್ಪನ್ನಗಳು, ಪರಿಸರ ಸ್ನೇಹಿ ವಸ್ತುಗಳು ಹಾಗೂ ಜೈವಿಕ ಇಂಧನಗಳ ತಯಾರಿಕೆಗೆ ಪ್ರಮುಖ ಕಚ್ಚಾ ವಸ್ತುವಾಗಿ ಹೊರಹೊಮ್ಮುತ್ತಿದೆ.

ಅಡಿಕೆ ಸಿಪ್ಪೆಯಲ್ಲಿ ಹೆಚ್ಚಿನ ಪ್ರಮಾಣದ ಸೆಲ್ಯುಲೋಸ್, ಹೆಮಿಸೆಲ್ಯುಲೋಸ್ ಹಾಗೂ ಜೈವಿಕ ಸಕ್ರಿಯ ರಾಸಾಯನಿಕಗಳು ಅಡಕವಾಗಿದ್ದು, ಕಾಗದ, ಬಟ್ಟೆ, ಔಷಧಿ, ಸೌಂದರ್ಯ ಉತ್ಪನ್ನ ಹಾಗೂ ಪೌಷ್ಟಿಕ ಆಹಾರ ಉದ್ಯಮಗಳಿಗೆ ಉಪಯುಕ್ತವಾಗಿವೆ. ಇದರೊಂದಿಗೆ, ಅಡಿಕೆ ಸಿಪ್ಪೆಯಿಂದ ಪರಿಸರ ಸ್ನೇಹಿ ಬಟ್ಟೆಗಳು, ಬಯೋಚಾರ್, ಆಕ್ಟಿವೇಟೆಡ್ ಕಾರ್ಬನ್ ಹಾಗೂ ಜೈವಿಕವಾಗಿ ಕರಗುವ ಕಾಂಪೋಸಿಟ್‌ಗಳು ತಯಾರಿಸುವ ಸಾಧ್ಯತೆಯೂ ಇದೆ. ಇವು ಕಟ್ಟಡ ನಿರ್ಮಾಣ, ಕೃಷಿ ಹಾಗೂ ಪ್ಯಾಕೇಜಿಂಗ್‌ ಕ್ಷೇತ್ರಗಳಲ್ಲಿ ಸುಸ್ಥಿರ ಪರ್ಯಾಯಗಳಾಗಿ ಬಳಕೆಯಾಗಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದಲ್ಲದೆ, ಅಡಿಕೆ ಸಿಪ್ಪೆ ಬಯೋಗ್ಯಾಸ್, ಬಯೋಎಥನಾಲ್ ಹಾಗೂ ಇತರೆ ಜೈವಿಕ ಇಂಧನಗಳ ಉತ್ಪಾದನೆಗೆ ಸಹ ಉತ್ತಮ ಮೂಲವಾಗಿದ್ದು, ಪರಂಪರಾಗತ ಇಂಧನಗಳ ಮೇಲೆ ಅವಲಂಬನೆ ಕಡಿಮೆ ಮಾಡಲು ಸಹಕಾರಿಯಾಗುತ್ತದೆ.

ಕೃಷಿ ತ್ಯಾಜ್ಯವೆಂದು ನಿರ್ಲಕ್ಷಿಸಲ್ಪಡುತ್ತಿದ್ದ ಅಡಿಕೆ ಸಿಪ್ಪೆಯನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವುದು ರೈತರಿಗೆ ಹೆಚ್ಚುವರಿ ಆದಾಯದ ದಾರಿಯನ್ನು ತೆರೆದಿದ್ದು, ಪರಿಸರ ಸಂರಕ್ಷಣೆ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ವರದಿ ಹೇಳಿದೆ.

ಅಡಿಕೆ ಬೆಳೆಗಾರರಿಗೆ ಇದುವರೆಗೆ ಸಿಪ್ಪೆ ತ್ಯಾಜ್ಯವೇ ಆಗಿತ್ತು. ಹಲವೆಡೆ ಸಿಪ್ಪೆಯನ್ನು ಸುಡಲಾಗುತ್ತಿತ್ತು ಅಥವಾ ತೋಟದಲ್ಲೇ ಬಿಟ್ಟುಕೊಡಲಾಗುತ್ತಿತ್ತು. ಆದರೆ ಸಂಶೋಧನೆ ಆಧಾರಿತ ಮೌಲ್ಯವರ್ಧನೆಯಿಂದ, ಈ ಸಿಪ್ಪೆಯೇ ರೈತರಿಗೆ ಹೆಚ್ಚುವರಿ ಆದಾಯದ ಮೂಲವಾಗುವ ಸಾಧ್ಯತೆ ಇದೆ.

ಗ್ರಾಮೀಣ ಮಟ್ಟದಲ್ಲಿ ಅಡಿಕೆ ಸಿಪ್ಪೆ ಸಂಗ್ರಹ, ಪ್ರಾಥಮಿಕ ಸಂಸ್ಕರಣೆ ಹಾಗೂ ಬಯೋಚಾರ–ಬಯೋಗ್ಯಾಸ್ ಘಟಕಗಳ ಸ್ಥಾಪನೆಯ ಮೂಲಕ ಉದ್ಯೋಗ ಸೃಷ್ಟಿ ಸಾಧ್ಯವಾಗುತ್ತದೆ. ಅಡಿಕೆ ಬೆಳೆಗಾರ ಸಂಘಗಳು , ಸಹಕಾರ ಸಂಸ್ಥೆಗಳು ಈ ನಿಟ್ಟಿನಲ್ಲಿ ಚಿಂತನೆಗಳನ್ನು  ನಡೆಸಿದೆ , ರೈತರ ಆದಾಯ ದ್ವಿಗುಣಗೊಳಿಸುವ ಸಹಾಯವಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago