ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಡಿಆರ್ಐ(The Department of Revenue Intelligence) ವಶಕ್ಕೆ ಪಡೆದಿದೆ. ಆರೋಪಿ ರವಿಕುಮಾರ್ ಎಂಬವರನ್ನು ಸೋಮವಾರ ಮಧುರೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ವೇಳೆ 4 ಕೋಟಿ ಮೌಲ್ಯದ 65 ಮೆಟ್ರಿಕ್ ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇಗೆರೆ ದಾಳಿ ನಡೆಸಿದ ಡಿಆರ್ಐ , ಟ್ಯುಟಿಕೋರಿನ್ನಲ್ಲಿ ನಾಲ್ಕು 40 ಕಂಟೈನರ್ಗಳನ್ನು ತಡೆಹಿಡಿಯಿತು. ಇಂಡೋನೇಷ್ಯಾದ ಜಕಾರ್ತಾದಿಂದ ಹತ್ತಿ ಉತ್ಪನ್ನದ ನೆಪದಲ್ಲಿ ಅಡಿಕೆಯನ್ನು ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗಿತ್ತು. ತಪಾಸಣೆಯ ವೇಳೆ ಹತ್ತಿಯ ಒಳಗಡೆ ಅಡಿಕೆ ಪತ್ತೆಯಾಗಿದೆ. 65 ಮೆಟ್ರಿಕ್ ಟನ್ ತೂಕದ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ತನಿಖೆಯ ಬಳಿಕ ಲಾಜಿಸ್ಟಿಕ್ಸ್ ಕಂಪನಿಯ ಮಾಲೀಕರಾಗಿರುವ ರವಿಕುಮಾರ್ ಎಂಬವರನ್ನು ವಶಕ್ಕೆ ಪಡೆಯಲಾಗಿತ್ತು.
ಮಾಹಿತಿ ಪ್ರಕಾರ, ಕೆಲವು ಅಧಿಕಾರಿಗಳು ಈ ಕಳ್ಳಸಾಗಾಣಿಕೆಯ ಚಟುವಟಿಕೆಗೆ ನೆರವಾಗುತ್ತಿದ್ದಾರೆ. ಅವರ ಸಹಾಯದಿಂದಲೇ ಆಮದು ವಸ್ತುಗಳನ್ನು ತಪ್ಪಾಗಿ ನಮೂದಿಸಿ ಅಡಿಕೆ ಸಾಗಾಣಿಕೆ ಮಾಡಲಾಗುತ್ತಿದೆ. ಇದೀಗ ಈ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಡಿಆರ್ಐ ಮೂಲ ತಿಳಿಸಿದೆ ಎಂದು TOI ವರದಿ ಮಾಡಿದೆ.
DRI (The Department of Revenue Intelligence) has arrested the main accused who was smuggling arecanut.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…