ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಡಿಆರ್ಐ(The Department of Revenue Intelligence) ವಶಕ್ಕೆ ಪಡೆದಿದೆ. ಆರೋಪಿ ರವಿಕುಮಾರ್ ಎಂಬವರನ್ನು ಸೋಮವಾರ ಮಧುರೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ವೇಳೆ 4 ಕೋಟಿ ಮೌಲ್ಯದ 65 ಮೆಟ್ರಿಕ್ ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇಗೆರೆ ದಾಳಿ ನಡೆಸಿದ ಡಿಆರ್ಐ , ಟ್ಯುಟಿಕೋರಿನ್ನಲ್ಲಿ ನಾಲ್ಕು 40 ಕಂಟೈನರ್ಗಳನ್ನು ತಡೆಹಿಡಿಯಿತು. ಇಂಡೋನೇಷ್ಯಾದ ಜಕಾರ್ತಾದಿಂದ ಹತ್ತಿ ಉತ್ಪನ್ನದ ನೆಪದಲ್ಲಿ ಅಡಿಕೆಯನ್ನು ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗಿತ್ತು. ತಪಾಸಣೆಯ ವೇಳೆ ಹತ್ತಿಯ ಒಳಗಡೆ ಅಡಿಕೆ ಪತ್ತೆಯಾಗಿದೆ. 65 ಮೆಟ್ರಿಕ್ ಟನ್ ತೂಕದ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ತನಿಖೆಯ ಬಳಿಕ ಲಾಜಿಸ್ಟಿಕ್ಸ್ ಕಂಪನಿಯ ಮಾಲೀಕರಾಗಿರುವ ರವಿಕುಮಾರ್ ಎಂಬವರನ್ನು ವಶಕ್ಕೆ ಪಡೆಯಲಾಗಿತ್ತು.
ಮಾಹಿತಿ ಪ್ರಕಾರ, ಕೆಲವು ಅಧಿಕಾರಿಗಳು ಈ ಕಳ್ಳಸಾಗಾಣಿಕೆಯ ಚಟುವಟಿಕೆಗೆ ನೆರವಾಗುತ್ತಿದ್ದಾರೆ. ಅವರ ಸಹಾಯದಿಂದಲೇ ಆಮದು ವಸ್ತುಗಳನ್ನು ತಪ್ಪಾಗಿ ನಮೂದಿಸಿ ಅಡಿಕೆ ಸಾಗಾಣಿಕೆ ಮಾಡಲಾಗುತ್ತಿದೆ. ಇದೀಗ ಈ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಡಿಆರ್ಐ ಮೂಲ ತಿಳಿಸಿದೆ ಎಂದು TOI ವರದಿ ಮಾಡಿದೆ.
DRI (The Department of Revenue Intelligence) has arrested the main accused who was smuggling arecanut. ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…