Advertisement
MIRROR FOCUS

ಅಡಿಕೆ ಕಳ್ಳಸಾಗಾಟದ ಕಿನ್‌ಪಿನ್‌ ವಶಕ್ಕೆ ಪಡೆದ ಡಿಆರ್‌ಐ | 65 ಮೆಟ್ರಿಕ್ ಟನ್ ಅಡಿಕೆ ಸಹಿತ ಆರೋಪಿ ಸೆರೆ |

Share

ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಡಿಆರ್‌ಐ(The Department of Revenue Intelligence) ವಶಕ್ಕೆ ಪಡೆದಿದೆ. ಆರೋಪಿ ರವಿಕುಮಾರ್‌ ಎಂಬವರನ್ನು ಸೋಮವಾರ ಮಧುರೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ವೇಳೆ 4 ಕೋಟಿ ಮೌಲ್ಯದ 65 ಮೆಟ್ರಿಕ್ ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇಗೆರೆ ದಾಳಿ ನಡೆಸಿದ ಡಿಆರ್‌ಐ , ಟ್ಯುಟಿಕೋರಿನ್‌ನಲ್ಲಿ ನಾಲ್ಕು 40  ಕಂಟೈನರ್‌ಗಳನ್ನು ತಡೆಹಿಡಿಯಿತು. ಇಂಡೋನೇಷ್ಯಾದ ಜಕಾರ್ತಾದಿಂದ ಹತ್ತಿ ಉತ್ಪನ್ನದ ನೆಪದಲ್ಲಿ ಅಡಿಕೆಯನ್ನು ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗಿತ್ತು. ತಪಾಸಣೆಯ ವೇಳೆ ಹತ್ತಿಯ ಒಳಗಡೆ ಅಡಿಕೆ ಪತ್ತೆಯಾಗಿದೆ. 65 ಮೆಟ್ರಿಕ್ ಟನ್ ತೂಕದ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ತನಿಖೆಯ ಬಳಿಕ ಲಾಜಿಸ್ಟಿಕ್ಸ್ ಕಂಪನಿಯ ಮಾಲೀಕರಾಗಿರುವ ರವಿಕುಮಾರ್‌ ಎಂಬವರನ್ನು ವಶಕ್ಕೆ ಪಡೆಯಲಾಗಿತ್ತು.

ಮಾಹಿತಿ ಪ್ರಕಾರ, ಕೆಲವು ಅಧಿಕಾರಿಗಳು ಈ ಕಳ್ಳಸಾಗಾಣಿಕೆಯ ಚಟುವಟಿಕೆಗೆ ನೆರವಾಗುತ್ತಿದ್ದಾರೆ. ಅವರ ಸಹಾಯದಿಂದಲೇ ಆಮದು ವಸ್ತುಗಳನ್ನು ತಪ್ಪಾಗಿ ನಮೂದಿಸಿ ಅಡಿಕೆ ಸಾಗಾಣಿಕೆ ಮಾಡಲಾಗುತ್ತಿದೆ. ಇದೀಗ  ಈ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಡಿಆರ್‌ಐ ಮೂಲ ತಿಳಿಸಿದೆ ಎಂದು TOI ವರದಿ ಮಾಡಿದೆ.

DRI (The Department of Revenue Intelligence) has arrested the main accused who was smuggling arecanut.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

3 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

4 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

5 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

8 hours ago