ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.ಮೇಘಾಲಯದ ಗಡಿಯಲ್ಲಿ ಬರ್ಮಾ ಅಡಿಕೆ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಕಳ್ಳಸಾಗಾಣಿಕೆದಾರರನ್ನು ಜಬೀರ್ ಹುಸೇನ್ ಮತ್ತು ಜಾಸಿಂ ಉದ್ದೀನ್ ಎಂದು ಗುರುತಿಸಲಾಗಿದೆ.
ಬರ್ಮಾ ಅಡಿಕೆಯನ್ನು ಕಳೆದ ಕೆಲವಾರು ಸಮಯಗಳಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಇದನ್ನು ಸತತವಾಗಿ ತಡೆಯುವ ಪ್ರಯತ್ನ ಮಾಡಲಾಗಿತ್ತು. ಆರೋಪಿಗಳು ಪತ್ತೆಯಾದರೂ ಮತ್ತೆ ಮತ್ತೆ ಇದೇ ರೀತಿಯಲ್ಲಿ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಇದೀಗ ಆರೋಪಿಗಳೂ ಅಸ್ಸಾಂನಲ್ಲಿ ಪೊಲೀಸರಿಗೆ ಹಲ್ಲೆ ನಡೆಸುವವರೆಗೂ ತಲಪಿದ್ದಾರೆ.
ಈ ಪ್ರಕರಣದಲ್ಲೂ ವಶಕ್ಕೆ ತೆಗೆದುಕೊಂಡಿದ್ದ ಆರೋಪಿಗಳನ್ನು ಪೊಲೀಸರು ಕರೆದೊಯ್ಯುವ ವೇಳೆ, ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…