ಅಡಿಕೆ ಮಾರುಕಟ್ಟೆ ಏರಿಕೆಯನ್ನು ಕಾಣುತ್ತಿದೆ. ಈ ನಡುವೆಯೇ ಅಡಿಕೆಗೆ ಸಂಬಂಧಿಸಿದ ಸುದ್ದಿಗಳು ಸದ್ದು ಮಾಡುತ್ತಿವೆ. ಮ್ಯಾನ್ಮಾರ್ ಗಡಿಯಲ್ಲಿ ಬೃಹತ್ ಪ್ರಮಾಣದ ಅಡಿಕೆ ವಶವಾಗಿದೆ. ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಬೃಹತ್ ಪ್ರಮಾಣದ ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ತಡೆಹಿಡಿದಿದ್ದಾರೆ.
ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅರೆಸೇನಾ ಪಡೆಯ ಪಡೆಗಳು ಚಾಂಡೆಲ್ ಜಿಲ್ಲೆಯ ಚೆಹ್ಯಾಂಗ್ ಗ್ರಾಮದಲ್ಲಿ ಅಡಿಕೆ ಸಾಗಿಸುತ್ತಿದ್ದ ವಾಹನಗಳನ್ನು ತಡೆದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಈ ನಡುವೆ, ಭಾರತ-ಶ್ರೀಲಂಕಾ ನಡುವಿನ ಮುಕ್ತ ವ್ಯಾಪಾರ ವಹಿವಾಟು ಅಡಿಯಲ್ಲಿ ಕಸ್ಟಮ್ಸ್ ಸುಂಕ ವಿನಾಯಿತಿಗೆ ಅರ್ಹವಾಗಿವೆ ಎನ್ನುವ ವರದಿಯೊಂದು ಬಂದಿದೆ. ಈ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ನ್ಯಾಯಾಲಯ ಪ್ರಕಟಿಸಿದೆ ಎನ್ನುವ ವರದಿಯೊಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…