ಅಡಿಕೆ ಮಾರುಕಟ್ಟೆ ಏರಿಕೆಯನ್ನು ಕಾಣುತ್ತಿದೆ. ಈ ನಡುವೆಯೇ ಅಡಿಕೆಗೆ ಸಂಬಂಧಿಸಿದ ಸುದ್ದಿಗಳು ಸದ್ದು ಮಾಡುತ್ತಿವೆ. ಮ್ಯಾನ್ಮಾರ್ ಗಡಿಯಲ್ಲಿ ಬೃಹತ್ ಪ್ರಮಾಣದ ಅಡಿಕೆ ವಶವಾಗಿದೆ. ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಬೃಹತ್ ಪ್ರಮಾಣದ ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ತಡೆಹಿಡಿದಿದ್ದಾರೆ.
ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅರೆಸೇನಾ ಪಡೆಯ ಪಡೆಗಳು ಚಾಂಡೆಲ್ ಜಿಲ್ಲೆಯ ಚೆಹ್ಯಾಂಗ್ ಗ್ರಾಮದಲ್ಲಿ ಅಡಿಕೆ ಸಾಗಿಸುತ್ತಿದ್ದ ವಾಹನಗಳನ್ನು ತಡೆದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಈ ನಡುವೆ, ಭಾರತ-ಶ್ರೀಲಂಕಾ ನಡುವಿನ ಮುಕ್ತ ವ್ಯಾಪಾರ ವಹಿವಾಟು ಅಡಿಯಲ್ಲಿ ಕಸ್ಟಮ್ಸ್ ಸುಂಕ ವಿನಾಯಿತಿಗೆ ಅರ್ಹವಾಗಿವೆ ಎನ್ನುವ ವರದಿಯೊಂದು ಬಂದಿದೆ. ಈ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ನ್ಯಾಯಾಲಯ ಪ್ರಕಟಿಸಿದೆ ಎನ್ನುವ ವರದಿಯೊಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ.
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…