ಭೂತಾನ್ನಲ್ಲಿನ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಭಾರತವು 279.2 ಕೋಟಿ ರೂಪಾಯಿಗಳ ಅಭಿವೃದ್ಧಿ ಸಹಾಯವನ್ನು ಒದಗಿಸುತ್ತಿದೆ. ರಸ್ತೆ ಮೂಲಸೌಕರ್ಯ, ನಗರಾಭಿವೃದ್ಧಿ, ಕೃಷಿ, ಕೈಗಾರಿಕಾ ಅಭಿವೃದ್ಧಿ, ಆರೋಗ್ಯ ಮೂಲಸೌಕರ್ಯ, ಶಿಕ್ಷಣ ಮತ್ತು ಸಂಸ್ಕೃತಿ ಸಂರಕ್ಷಣೆಯಂತಹ ಕ್ಷೇತ್ರಗಳಲ್ಲಿ ಅನುಷ್ಟಾನ ಮಾಡಲಾಗುತ್ತದೆ ಎಂದು ಭೂತಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಭೂತಾನ್ನಲ್ಲಿ ವ್ಯಾಪಾರ ಮೂಲಸೌಕರ್ಯ ಮತ್ತು ಆಡಳಿತ ಕಾರ್ಯವಿಧಾನಗಳನ್ನು ಅಭಿವೃದ್ಧಿಪಡಿಸಲು ಪರಿವರ್ತನಾ ವ್ಯಾಪಾರ ಬೆಂಬಲ ಸೌಲಭ್ಯಕ್ಕಾಗಿ ಕೂಡಾ ನೆರವು ನೀಡಲಾಗುತ್ತಿದೆ. ಭಾರತವು ಭೂತಾನ್ನಾದ್ಯಂತ ಹಲವಾರು ಯೋಜನೆಗಳ ಅಭಿವೃದ್ಧಿಯನ್ನು ಬೆಂಬಲಿಸುತ್ತಿದೆ. ಭೂತಾನ್ ಭಾರತದ ಉತ್ತಮ ಸ್ನೇಹಿತ ದೇಶವಾಗಿ ಮುಂದುವರಿಯುತ್ತಿದೆ. ಭಾರತಕ್ಕೆ ಭೂತಾನ್ ದೇಶವು ವಿವಿಧ ಕಾರಣಗಳಿಗೆ ಹತ್ತಿರವಾಗಿದೆ. ಈಗ ಉಭಯ ದೇಶಗಳ ನಡುವಿನ ರಾಜಕೀಯ ಸಂಬಂಧಗಳು ಕೂಡ ಬಹಳ ಉತ್ತಮವಾಗಿವೆ. ಭೂತಾನ್ ಎಲ್ಲಾ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತಕ್ಕೆ ಬೆಂಬಲವನ್ನು ನೀಡುತ್ತದೆ.
ಇದಕ್ಕೆ ಪ್ರಮುಖ ಕಾರಣ ಇದೆ. ಭೂತಾನ್ ಚೀನಾದೊಂದಿಗೆ ಈಚೆಗೆ ಸೀಮಿತ ರಾಜತಾಂತ್ರಿಕ ಸಂಬಂಧಗಳನ್ನು ಹೊಂದಿದೆ. ಭೂತಾನ್ ಮೇಲೆ ಭಾರತದ ಒತ್ತಡವೇ ಕಾರಣ ಎಂದು ಚೀನಾ ಈಚೆಗೆ ಹೇಳಿದೆ. ಭೂತಾನ್ ದೇಶವು ಭಾರತ ಮತ್ತು ಚೀನಾ ನಡುವಿನ ಬಫರ್ ದೇಶವಾಗಿದೆ. ಹೀಗಾಗಿ ಈಗ ಭಾರತಕ್ಕೆ ಭೂತಾನ್ ದೇಶವು ಹೆಚ್ಚು ಆಪ್ತವಾಗಿದೆ. ಭೂತಾನ್ ಚೀತಾನದೊಂದಿಗೆ ಸೀಮಿತ ಸಂಬಂಧ ಹೊಂದಿದೆ. ಆದರೆ ಭಾರತವು ಈಗ ಭೂತಾನ್ಗೆ ಹೆಚ್ಚಿನ ಅನುದಾನದ ನೆರವು ಒದಗಿಸುವ ದೇಶವಾಗಿದೆ.
ಭಾರತವು ಈಗ ಭೂತಾನ್ನ ಅತಿದೊಡ್ಡ ವ್ಯಾಪಾರ ಪಾಲುದಾರ ದೇಶವೂ ಆಗಿದೆ. ಇತ್ತೀಚೆಗೆ, ಭೂತಾನ್ ಸರ್ಕಾರದ ಕೋರಿಕೆಯ ಮೇರೆಗೆ ಭೂತಾನ್ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಭಾರತವು ನಿಯಮಾವಳಿಗಳನ್ನು ಸಡಿಲಗೊಳಿಸಿದೆ. ಭಾರತ ಸರ್ಕಾರವು ಭೂತಾನ್ನಿಂದ ವಾರ್ಷಿಕವಾಗಿ 17,000 ಟನ್ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿದೆ. ಭೂತಾನ್ ದೇಶವು ಭಾರತದ ಅಡಿಕೆ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಕೂಡಾ ಸಿದ್ಧತೆ ಮಾಡಿಕೊಂಡಿದೆ.
ಹೀಗಾಗಿ ಸದ್ಯ ಭೂತಾನ್ ದೇಶದಿಂದ ಅಡಿಕೆ ಆಮದು ಸ್ಥಗಿತಗೊಳ್ಳುವುದು ಕಷ್ಟವಿದೆ. ಭಾರತಕ್ಕೆ ಅಂತರಾಷ್ಟ್ರೀಯ ಸಂಬಂಧ ಗಟ್ಟಿಯಾಗಲು ಹಾಗೂ ನೆರೆಯ ಚೀನಾ ದೇಶವನ್ನು ಬಗ್ಗು ಬಡಿಯಲು ಭೂತಾನ್ ನೆರವು ಅಗತ್ಯವಿದೆ. ಇದಕ್ಕಾಗಿ ಕೆಲವೊಂದು ನಿಯಮಗಳಲ್ಲೂ ಬದಲಾವಣೆ ಮಾಡಲಾಗಿದೆ ಎನ್ನುವುದು ರಾಜಕೀಯ ವಿಶ್ಲೇಷಣೆಯ ವರದಿಯಾಗಿದೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…