Advertisement
The Rural Mirror ಫಾಲೋಅಪ್

ಭೂತಾನ್‌ ದೇಶದ ಮೂಲಸೌಕರ್ಯ ಯೋಜನೆಗಳಿಗೆ ಭಾರತದಿಂದ 279.2 ಕೋಟಿ ನೆರವು | ಭಾರತವು ಭೂತಾನ್‌ ನೆರವಿಗೆ ನಿಲ್ಲುತ್ತಿರುವುದು ಏಕೆ?

Share
ಭೂತಾನ್‌ ಅಡಿಕೆ ಆಮದು ಬಗ್ಗೆ ಕಳೆದ ಹಲವು ದಿನಗಳಿಂದ ಭಾರತದ ಅದರಲ್ಲೂ ಕರ್ನಾಟಕದ ಗ್ರಾಮೀಣ ಭಾಗದಲ್ಲೂ ಚರ್ಚೆಯಾಗುತ್ತಿದೆ. ಹೀಗೆ ಅಡಿಕೆ ಆಮದು ಮಾಡಲೂ ಕಾರಣವಿದೆ. ಭೂತಾನ್‌ ಜೊತೆಗಿನ ಸ್ನೇಹವನ್ನು ಭಾರತ ಹೆಚ್ಚು ಬಯಸುತ್ತಿದೆ. ಭೂತಾನ್‌ ಕೂಡಾ ಭಾರತದ ಸ್ನೇಹವನ್ನು ನಿರೀಕ್ಷೆ ಮಾಡುತ್ತಿದೆ. ಇದರ ಹಿಂದೆ ಸೂಕ್ಷ್ಮ ನೋಟವೂ ಕಂಡುಬಂದಿದೆ. ಈ ನಡುವೆಯೇ ಭಾರತವು ಭೂತಾನ್‌ ದೇಶದ ಮೂಲಸೌಕರ್ಯಗಳಿಗೆ ನೆರವು ನೀಡುತ್ತಿದೆ.

ಭೂತಾನ್‌ನಲ್ಲಿನ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಭಾರತವು 279.2 ಕೋಟಿ ರೂಪಾಯಿಗಳ ಅಭಿವೃದ್ಧಿ ಸಹಾಯವನ್ನು ಒದಗಿಸುತ್ತಿದೆ. ರಸ್ತೆ ಮೂಲಸೌಕರ್ಯ, ನಗರಾಭಿವೃದ್ಧಿ, ಕೃಷಿ, ಕೈಗಾರಿಕಾ ಅಭಿವೃದ್ಧಿ, ಆರೋಗ್ಯ ಮೂಲಸೌಕರ್ಯ, ಶಿಕ್ಷಣ ಮತ್ತು ಸಂಸ್ಕೃತಿ ಸಂರಕ್ಷಣೆಯಂತಹ ಕ್ಷೇತ್ರಗಳಲ್ಲಿ ಅನುಷ್ಟಾನ ಮಾಡಲಾಗುತ್ತದೆ  ಎಂದು ಭೂತಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಭೂತಾನ್‌ನಲ್ಲಿ ವ್ಯಾಪಾರ ಮೂಲಸೌಕರ್ಯ ಮತ್ತು ಆಡಳಿತ ಕಾರ್ಯವಿಧಾನಗಳನ್ನು ಅಭಿವೃದ್ಧಿಪಡಿಸಲು ಪರಿವರ್ತನಾ ವ್ಯಾಪಾರ ಬೆಂಬಲ ಸೌಲಭ್ಯಕ್ಕಾಗಿ ಕೂಡಾ ನೆರವು ನೀಡಲಾಗುತ್ತಿದೆ. ಭಾರತವು ಭೂತಾನ್‌ನಾದ್ಯಂತ ಹಲವಾರು  ಯೋಜನೆಗಳ ಅಭಿವೃದ್ಧಿಯನ್ನು ಬೆಂಬಲಿಸುತ್ತಿದೆ. ಭೂತಾನ್ ಭಾರತದ ಉತ್ತಮ ಸ್ನೇಹಿತ ದೇಶವಾಗಿ ಮುಂದುವರಿಯುತ್ತಿದೆ. ಭಾರತಕ್ಕೆ ಭೂತಾನ್‌ ದೇಶವು ವಿವಿಧ ಕಾರಣಗಳಿಗೆ ಹತ್ತಿರವಾಗಿದೆ. ಈಗ ಉಭಯ ದೇಶಗಳ ನಡುವಿನ ರಾಜಕೀಯ ಸಂಬಂಧಗಳು ಕೂಡ ಬಹಳ ಉತ್ತಮವಾಗಿವೆ. ಭೂತಾನ್ ಎಲ್ಲಾ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತಕ್ಕೆ ಬೆಂಬಲವನ್ನು ನೀಡುತ್ತದೆ.

ಇದಕ್ಕೆ ಪ್ರಮುಖ ಕಾರಣ ಇದೆ. ಭೂತಾನ್ ಚೀನಾದೊಂದಿಗೆ ಈಚೆಗೆ ಸೀಮಿತ ರಾಜತಾಂತ್ರಿಕ ಸಂಬಂಧಗಳನ್ನು ಹೊಂದಿದೆ. ಭೂತಾನ್ ಮೇಲೆ ಭಾರತದ ಒತ್ತಡವೇ ಕಾರಣ ಎಂದು ಚೀನಾ ಈಚೆಗೆ ಹೇಳಿದೆ. ಭೂತಾನ್ ದೇಶವು ಭಾರತ ಮತ್ತು ಚೀನಾ ನಡುವಿನ ಬಫರ್ ದೇಶವಾಗಿದೆ. ಹೀಗಾಗಿ ಈಗ ಭಾರತಕ್ಕೆ ಭೂತಾನ್‌ ದೇಶವು ಹೆಚ್ಚು ಆಪ್ತವಾಗಿದೆ. ಭೂತಾನ್‌ ಚೀತಾನದೊಂದಿಗೆ ಸೀಮಿತ ಸಂಬಂಧ ಹೊಂದಿದೆ. ಆದರೆ ಭಾರತವು ಈಗ ಭೂತಾನ್‌ಗೆ ಹೆಚ್ಚಿನ ಅನುದಾನದ ನೆರವು ಒದಗಿಸುವ ದೇಶವಾಗಿದೆ.

ಭಾರತವು ಈಗ ಭೂತಾನ್‌ನ ಅತಿದೊಡ್ಡ ವ್ಯಾಪಾರ ಪಾಲುದಾರ  ದೇಶವೂ ಆಗಿದೆ. ಇತ್ತೀಚೆಗೆ, ಭೂತಾನ್ ಸರ್ಕಾರದ ಕೋರಿಕೆಯ ಮೇರೆಗೆ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಭಾರತವು ನಿಯಮಾವಳಿಗಳನ್ನು ಸಡಿಲಗೊಳಿಸಿದೆ. ಭಾರತ ಸರ್ಕಾರವು ಭೂತಾನ್‌ನಿಂದ ವಾರ್ಷಿಕವಾಗಿ 17,000 ಟನ್ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿದೆ.‌ ಭೂತಾನ್‌ ದೇಶವು ಭಾರತದ ಅಡಿಕೆ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಕೂಡಾ ಸಿದ್ಧತೆ ಮಾಡಿಕೊಂಡಿದೆ.

ಹೀಗಾಗಿ ಸದ್ಯ ಭೂತಾನ್‌ ದೇಶದಿಂದ ಅಡಿಕೆ ಆಮದು ಸ್ಥಗಿತಗೊಳ್ಳುವುದು ಕಷ್ಟವಿದೆ. ಭಾರತಕ್ಕೆ ಅಂತರಾಷ್ಟ್ರೀಯ ಸಂಬಂಧ ಗಟ್ಟಿಯಾಗಲು ಹಾಗೂ ನೆರೆಯ ಚೀನಾ ದೇಶವನ್ನು ಬಗ್ಗು ಬಡಿಯಲು ಭೂತಾನ್‌ ನೆರವು ಅಗತ್ಯವಿದೆ. ಇದಕ್ಕಾಗಿ ಕೆಲವೊಂದು ನಿಯಮಗಳಲ್ಲೂ ಬದಲಾವಣೆ ಮಾಡಲಾಗಿದೆ ಎನ್ನುವುದು ರಾಜಕೀಯ ವಿಶ್ಲೇಷಣೆಯ ವರದಿಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

8 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

8 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

9 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

17 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

17 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago