ಭೂತಾನ್‌ ಅಡಿಕೆ ಆಮದು | ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮವಿಲ್ಲ – ಸಚಿವೆ ಶೋಭಾ ಕರಂದ್ಲಾಜೆ |

September 30, 2022
8:54 PM

ಭೂತಾನ್‌ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಎಂದು ಕೃಷಿ ಮತ್ತು ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಭಾರತದಲ್ಲಿ ಸುಮಾರು 15 ಲಕ್ಷ ಟನ್‌ ಅಡಿಕೆ ಬೆಳೆಯಲಾಗುತ್ತದೆ.  ಭೂತಾನ್‌ ದೇಶದಲ್ಲಿ ಕೇವಲ 17 ಸಾವಿರ  ಟನ್ ಅಡಿಕೆ ಬೆಳೆಯಲಾಗುತ್ತಿದೆ.‌ ನಮ್ಮ ದೇಶದ ಬೆಳೆಯ 0.02 ಪ್ರಮಾಣದಷ್ಟು ಮಾತ್ರಾ ಅಲ್ಲಿ ಅಡಿಕೆ ಇದೆ. ಹೀಗಾಗಿ ಈ ಅಡಿಕೆ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಗೆ ಪರಿಣಾಮವಾಗದು.  ಭೂತಾನ್‌ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಭೂತಾನ್ ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆಯಷ್ಟೇ ಎಂದು  ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ ಎಂದ ಶೋಭಾ ಕರಂದ್ಲಾಜೆ ಅಡಿಕೆ ಕಳ್ಳಸಾಗಾಣಿಕೆಗೂ ಸರ್ಕಾರ ಕ್ರಮ ಕೈಗೊಂಡಿತ್ತು. ಈಗ ಭೂತಾನ್‌ ದೇಶದಿಂದ ಆಮದು ಕಾರಣದಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror