ಭೂತಾನ್ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಎಂದು ಕೃಷಿ ಮತ್ತು ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಭಾರತದಲ್ಲಿ ಸುಮಾರು 15 ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತದೆ. ಭೂತಾನ್ ದೇಶದಲ್ಲಿ ಕೇವಲ 17 ಸಾವಿರ ಟನ್ ಅಡಿಕೆ ಬೆಳೆಯಲಾಗುತ್ತಿದೆ. ನಮ್ಮ ದೇಶದ ಬೆಳೆಯ 0.02 ಪ್ರಮಾಣದಷ್ಟು ಮಾತ್ರಾ ಅಲ್ಲಿ ಅಡಿಕೆ ಇದೆ. ಹೀಗಾಗಿ ಈ ಅಡಿಕೆ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಗೆ ಪರಿಣಾಮವಾಗದು. ಭೂತಾನ್ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಭೂತಾನ್ ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆಯಷ್ಟೇ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ ಎಂದ ಶೋಭಾ ಕರಂದ್ಲಾಜೆ ಅಡಿಕೆ ಕಳ್ಳಸಾಗಾಣಿಕೆಗೂ ಸರ್ಕಾರ ಕ್ರಮ ಕೈಗೊಂಡಿತ್ತು. ಈಗ ಭೂತಾನ್ ದೇಶದಿಂದ ಆಮದು ಕಾರಣದಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…