ಭೂತಾನ್ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಎಂದು ಕೃಷಿ ಮತ್ತು ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಭಾರತದಲ್ಲಿ ಸುಮಾರು 15 ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತದೆ. ಭೂತಾನ್ ದೇಶದಲ್ಲಿ ಕೇವಲ 17 ಸಾವಿರ ಟನ್ ಅಡಿಕೆ ಬೆಳೆಯಲಾಗುತ್ತಿದೆ. ನಮ್ಮ ದೇಶದ ಬೆಳೆಯ 0.02 ಪ್ರಮಾಣದಷ್ಟು ಮಾತ್ರಾ ಅಲ್ಲಿ ಅಡಿಕೆ ಇದೆ. ಹೀಗಾಗಿ ಈ ಅಡಿಕೆ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಗೆ ಪರಿಣಾಮವಾಗದು. ಭೂತಾನ್ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಭೂತಾನ್ ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆಯಷ್ಟೇ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ ಎಂದ ಶೋಭಾ ಕರಂದ್ಲಾಜೆ ಅಡಿಕೆ ಕಳ್ಳಸಾಗಾಣಿಕೆಗೂ ಸರ್ಕಾರ ಕ್ರಮ ಕೈಗೊಂಡಿತ್ತು. ಈಗ ಭೂತಾನ್ ದೇಶದಿಂದ ಆಮದು ಕಾರಣದಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…