Advertisement
The Rural Mirror ಫಾಲೋಅಪ್

ಭೂತಾನ್‌ ಅಡಿಕೆ ಆಮದು | ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮವಿಲ್ಲ – ಸಚಿವೆ ಶೋಭಾ ಕರಂದ್ಲಾಜೆ |

Share

ಭೂತಾನ್‌ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಎಂದು ಕೃಷಿ ಮತ್ತು ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಭಾರತದಲ್ಲಿ ಸುಮಾರು 15 ಲಕ್ಷ ಟನ್‌ ಅಡಿಕೆ ಬೆಳೆಯಲಾಗುತ್ತದೆ.  ಭೂತಾನ್‌ ದೇಶದಲ್ಲಿ ಕೇವಲ 17 ಸಾವಿರ  ಟನ್ ಅಡಿಕೆ ಬೆಳೆಯಲಾಗುತ್ತಿದೆ.‌ ನಮ್ಮ ದೇಶದ ಬೆಳೆಯ 0.02 ಪ್ರಮಾಣದಷ್ಟು ಮಾತ್ರಾ ಅಲ್ಲಿ ಅಡಿಕೆ ಇದೆ. ಹೀಗಾಗಿ ಈ ಅಡಿಕೆ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಗೆ ಪರಿಣಾಮವಾಗದು.  ಭೂತಾನ್‌ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಭೂತಾನ್ ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆಯಷ್ಟೇ ಎಂದು  ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ ಎಂದ ಶೋಭಾ ಕರಂದ್ಲಾಜೆ ಅಡಿಕೆ ಕಳ್ಳಸಾಗಾಣಿಕೆಗೂ ಸರ್ಕಾರ ಕ್ರಮ ಕೈಗೊಂಡಿತ್ತು. ಈಗ ಭೂತಾನ್‌ ದೇಶದಿಂದ ಆಮದು ಕಾರಣದಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?

ಸೂಪರ್‌ ಎಲ್‌ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…

5 hours ago

ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ

ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…

6 hours ago

ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ

ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…

6 hours ago

ದೇಶವ್ಯಾಪಿ ಗೋಹತ್ಯೆ ನಿಷೇಧ ಅಥವಾ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನಕ್ಕೆ ಪ್ರಸ್ತಾವನೆ ಇಲ್ಲ

ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…

6 hours ago

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ..! – ರೋಗ ನಿರೋಧಕ ತಳಿಗಳೇ ಭವಿಷ್ಯದ ಆಶಾಕಿರಣ

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…

13 hours ago