Advertisement
MIRROR FOCUS

ವಾಣಿಜ್ಯ ಉದ್ದೇಶಕ್ಕಾಗಿ ಅಡಿಕೆ ಆಮದಿಗೆ ಅನುಮತಿ | ನೇಪಾಳ ಸರ್ಕಾರದ ತೀರ್ಮಾನ ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮವಾದೀತೇ ? |

Share

ವಾಣಿಜ್ಯ ಉದ್ದೇಶಕ್ಕಾಗಿ ಅಡಿಕೆ, ಕರಿಮೆಣಸು ಸೇರಿದಂತೆ ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳಲು ನೇಪಾಳ ಸರ್ಕಾರ ಅನುಮತಿ ನೀಡಿದೆ. ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವಾಲಯವು ನೇಪಾಳ ಗೆಜೆಟ್‌ನಲ್ಲಿ ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಕಳ್ಳಸಾಗಣೆಯಾಗುತ್ತಿದ್ದ ಈ ವಸ್ತುಗಳ ಆಮದನ್ನು ವ್ಯಾಪಾರಿಗಳಿಗೆ ಅನುಮತಿಸಲಾಗಿದೆ ಎಂದು ಹೇಳಿದೆ. ಇದು ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮವಾದೀತೇ ಎಂಬ ಪ್ರಶ್ನೆ ಎದ್ದಿದೆ. ಸದ್ಯ ಯಾವುದೇ ಪರಿಣಾಮವಾಗದೇ ಇದ್ದರೂ ಅಡಿಕೆ ಮಾರುಕಟ್ಟೆ ಭಾರೀ ಏರಿಕೆಯ ನಿರೀಕ್ಷೆ ಸದ್ಯಕ್ಕೆ ಕಷ್ಟ ಎಂದು ಅಂದಾಜಿಸಲಾಗಿದೆ. ಸದ್ಯ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು.

Advertisement
Advertisement

ನೇಪಾಳದ ವಿದೇಶಿ ವಿನಿಮಯ ಸಂಗ್ರಹವು ಕುಸಿಯುತ್ತಿರುವ ಮತ್ತು ಸರ್ಕಾರವು 1,500 ಕ್ಕೂ ಹೆಚ್ಚು ವಸ್ತುಗಳ ಆಮದನ್ನು ಬಿಗಿಗೊಳಿಸುತ್ತಿರುವ ಸಮಯದಲ್ಲಿ, ಸರ್ಕಾರವು ಕೈಗಾರಿಕಾ ಉದ್ದೇಶಗಳಿಗಾಗಿ ಅಡಿಕೆ ಹಾಗೂ ಇತರ ಕೆಲವು ವಸ್ತುಗಳ ಆಮದನ್ನು ಮುಕ್ತವಾಗಿಸಿ ಅನುಮತಿ ನೀಡಿದೆ. ನೇಪಾಳ ಸರ್ಕಾರ ಅಡಿಕೆಯನ್ನು  ಪ್ರತ್ಯೇಕಿಸಿ ಆಮದಿಗೆ ಅವಕಾಶ ಮಾಡಿದೆ.

ನೇಪಾಳದಲ್ಲಿ ಕಡಿಮೆ ಅಡಿಕೆ ಬೆಳೆಯುತ್ತಿದ್ದರೂ ಅತೀ ಹೆಚ್ಚಿನ ಪ್ರಮಾಣದಲ್ಲಿ ಬಾಂಗ್ಲಾ ಸೇರಿದಂತೆ ವಿವಿದೆಡೆಯಿಂದ ಆಮದಾಗಿ ಭಾರತಕ್ಕೆ ರಪ್ತಾಗುತ್ತಿತ್ತು. ಯಾವುದೇ ತೆರಿಗೆ ಇಲ್ಲದೆ ಭಾರತ ಹಾಗೂ ನೇಪಾಳದ ನಡುವೆ ಅಡಿಕೆ ಸಾಗಾಟ ಅಧಿಕೃತವಾಗಿ ನಡೆಯುತ್ತಿತ್ತು. ಹೀಗಾಗಿ ವಿವಿದೆಡೆಯ ಅಡಿಕೆಯು ಭಾರತದೊಳಗೆ ನೇಪಾಳ ಮೂಲಕ ಆಮದಾಗುತ್ತಿತ್ತು. ಕೊರೋನಾ ನಂತರ ದೇಶದ ಎಲ್ಲಾ ಗಡಿಗಳು ಭದ್ರತೆಯಿಂದ ಕೂಡಿದ್ದ ಕಾರಣದಿಂದ ಅಡಿಕೆ ಆಮದು ಕಷ್ಟವಾಯಿತು. ಆದರೆ ನೇಪಾಳ ದಾರಿಯಲ್ಲಿ ಸ್ವಲ್ಪ ಪ್ರಮಾಣದ ಅಡಿಕೆ ಭಾರತಕ್ಕೆ ಬರುತ್ತಿತ್ತು.  ಯಾವುದೇ ತೆರಿಗೆ ಇಲ್ಲದೆ ನೇಪಾಳಕ್ಕೂ ನಷ್ಟವಾಗುವ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಅಡಿಕೆ ಆಮದು ಹಾಗೂ ರಫ್ತು ಮೇಲೆ ನೇಪಾಳ ಸರ್ಕಾರ ಹಿಡಿತ ಸಾಧಿಸಿ, ನಿರ್ಬಂಧ ಹೇರಿತ್ತು. ಇದರಿಂದ ಭಾರತದ ಅಡಿಕೆ ಮಾರುಕಟ್ಟೆ ಬಿಗುಗೊಂಡು ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಲೂ ಒಂದು ಕಾರಣವಾಯಿತು.

ಇದೀಗ ತೆರಿಗೆ ಸಹಿತವಾಗಿ ಅಡಿಕೆ ಆಮದಿಗೆ ನೇಪಾಳ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ನೇಪಾಳಕ್ಕೆ ಆಮದು ಆಗಿ ತೆರಿಗೆ ಸೇರಿದಂತೆ ಭಾರತಕ್ಕೆ ಮತ್ತೆ ಸಾಗಾಟವಾಗುವ ವೇಳೆಗೆ ಬಹುಪಾಲು ಭಾರತದ ಅಡಿಕೆ ಮಾರುಕಟ್ಟೆಯ ಈಗಿನ ಧಾರಣೆಯೇ ಆಗಿರುತ್ತದೆ. ಹೀಗಾಗಿ ಅಡಿಕೆ ಧಾರಣೆ ಮುಂದೆ ಭಾರೀ ಏರಿಕೆಯ ನಿರೀಕ್ಷೆ ಸದ್ಯಕ್ಕೆ ಕಷ್ಟ ಸಾಧ್ಯವೇ ಎಂಬುದು ಮಾರುಕಟ್ಟೆ ವಲಯದ ಅಭಿಪ್ರಾಯ. ಆದರೆ ಈಗಿನ ಅಡಿಕೆ ಮಾರುಕಟ್ಟೆ, ಧಾರಣೆಯ ಮೇಲೆ ಸದ್ಯ ಯಾವುದೇ ಪರಿಣಾಮ ಬೀರಲಾರದು ಎನ್ನುವುದು  ಈಗಿನ ಅಂದಾಜು. ಮಾರುಕಟ್ಟೆ ಕುಸಿತವಾಗದಂತೆ ಈಗಾಗಲೇ ಸಾಕಷ್ಟು ಎಚ್ಚರಿಕೆಗಳನ್ನು ಸರ್ಕಾರವೂ ಕೈಗೊಂಡಿದೆ. ಭಾರತದೊಳಗ್ಗೆ ಅಸ್ಸಾಂ ಗಡಿಯ ಮೂಲಕ ಅಕ್ರಮವಾಗಿ ಅಡಿಕೆ ಆಮದಾಗುತ್ತಿರುವುದು ಬಹುಪಾಲು ಕಡಿಮೆಯಾಗಿದ್ದು, ಇನ್ನೀಗ ಅಧಿಕೃತವಾಗಿ ನೇಪಾಳದ ಮೂಲಕ ಭಾರತದೊಳಕ್ಕೆ ಬರುವ ಅಡಿಕೆಯ ಬಗ್ಗೆ ಮಾತ್ರಾ ಹೆಚ್ಚು ನಿಗಾ ಇಡಬೇಕಾಗಿದೆ ಎನ್ನುವುದು ಮಾರುಕಟ್ಟೆ ತಜ್ಞರ ಅಭಿಪ್ರಾಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

3 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

4 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago