Advertisement
MIRROR FOCUS

ವಾಣಿಜ್ಯ ಉದ್ದೇಶಕ್ಕಾಗಿ ಅಡಿಕೆ ಆಮದಿಗೆ ಅನುಮತಿ | ನೇಪಾಳ ಸರ್ಕಾರದ ತೀರ್ಮಾನ ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮವಾದೀತೇ ? |

Share

ವಾಣಿಜ್ಯ ಉದ್ದೇಶಕ್ಕಾಗಿ ಅಡಿಕೆ, ಕರಿಮೆಣಸು ಸೇರಿದಂತೆ ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳಲು ನೇಪಾಳ ಸರ್ಕಾರ ಅನುಮತಿ ನೀಡಿದೆ. ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವಾಲಯವು ನೇಪಾಳ ಗೆಜೆಟ್‌ನಲ್ಲಿ ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಕಳ್ಳಸಾಗಣೆಯಾಗುತ್ತಿದ್ದ ಈ ವಸ್ತುಗಳ ಆಮದನ್ನು ವ್ಯಾಪಾರಿಗಳಿಗೆ ಅನುಮತಿಸಲಾಗಿದೆ ಎಂದು ಹೇಳಿದೆ. ಇದು ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮವಾದೀತೇ ಎಂಬ ಪ್ರಶ್ನೆ ಎದ್ದಿದೆ. ಸದ್ಯ ಯಾವುದೇ ಪರಿಣಾಮವಾಗದೇ ಇದ್ದರೂ ಅಡಿಕೆ ಮಾರುಕಟ್ಟೆ ಭಾರೀ ಏರಿಕೆಯ ನಿರೀಕ್ಷೆ ಸದ್ಯಕ್ಕೆ ಕಷ್ಟ ಎಂದು ಅಂದಾಜಿಸಲಾಗಿದೆ. ಸದ್ಯ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು.

ನೇಪಾಳದ ವಿದೇಶಿ ವಿನಿಮಯ ಸಂಗ್ರಹವು ಕುಸಿಯುತ್ತಿರುವ ಮತ್ತು ಸರ್ಕಾರವು 1,500 ಕ್ಕೂ ಹೆಚ್ಚು ವಸ್ತುಗಳ ಆಮದನ್ನು ಬಿಗಿಗೊಳಿಸುತ್ತಿರುವ ಸಮಯದಲ್ಲಿ, ಸರ್ಕಾರವು ಕೈಗಾರಿಕಾ ಉದ್ದೇಶಗಳಿಗಾಗಿ ಅಡಿಕೆ ಹಾಗೂ ಇತರ ಕೆಲವು ವಸ್ತುಗಳ ಆಮದನ್ನು ಮುಕ್ತವಾಗಿಸಿ ಅನುಮತಿ ನೀಡಿದೆ. ನೇಪಾಳ ಸರ್ಕಾರ ಅಡಿಕೆಯನ್ನು  ಪ್ರತ್ಯೇಕಿಸಿ ಆಮದಿಗೆ ಅವಕಾಶ ಮಾಡಿದೆ.

ನೇಪಾಳದಲ್ಲಿ ಕಡಿಮೆ ಅಡಿಕೆ ಬೆಳೆಯುತ್ತಿದ್ದರೂ ಅತೀ ಹೆಚ್ಚಿನ ಪ್ರಮಾಣದಲ್ಲಿ ಬಾಂಗ್ಲಾ ಸೇರಿದಂತೆ ವಿವಿದೆಡೆಯಿಂದ ಆಮದಾಗಿ ಭಾರತಕ್ಕೆ ರಪ್ತಾಗುತ್ತಿತ್ತು. ಯಾವುದೇ ತೆರಿಗೆ ಇಲ್ಲದೆ ಭಾರತ ಹಾಗೂ ನೇಪಾಳದ ನಡುವೆ ಅಡಿಕೆ ಸಾಗಾಟ ಅಧಿಕೃತವಾಗಿ ನಡೆಯುತ್ತಿತ್ತು. ಹೀಗಾಗಿ ವಿವಿದೆಡೆಯ ಅಡಿಕೆಯು ಭಾರತದೊಳಗೆ ನೇಪಾಳ ಮೂಲಕ ಆಮದಾಗುತ್ತಿತ್ತು. ಕೊರೋನಾ ನಂತರ ದೇಶದ ಎಲ್ಲಾ ಗಡಿಗಳು ಭದ್ರತೆಯಿಂದ ಕೂಡಿದ್ದ ಕಾರಣದಿಂದ ಅಡಿಕೆ ಆಮದು ಕಷ್ಟವಾಯಿತು. ಆದರೆ ನೇಪಾಳ ದಾರಿಯಲ್ಲಿ ಸ್ವಲ್ಪ ಪ್ರಮಾಣದ ಅಡಿಕೆ ಭಾರತಕ್ಕೆ ಬರುತ್ತಿತ್ತು.  ಯಾವುದೇ ತೆರಿಗೆ ಇಲ್ಲದೆ ನೇಪಾಳಕ್ಕೂ ನಷ್ಟವಾಗುವ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಅಡಿಕೆ ಆಮದು ಹಾಗೂ ರಫ್ತು ಮೇಲೆ ನೇಪಾಳ ಸರ್ಕಾರ ಹಿಡಿತ ಸಾಧಿಸಿ, ನಿರ್ಬಂಧ ಹೇರಿತ್ತು. ಇದರಿಂದ ಭಾರತದ ಅಡಿಕೆ ಮಾರುಕಟ್ಟೆ ಬಿಗುಗೊಂಡು ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಲೂ ಒಂದು ಕಾರಣವಾಯಿತು.

ಇದೀಗ ತೆರಿಗೆ ಸಹಿತವಾಗಿ ಅಡಿಕೆ ಆಮದಿಗೆ ನೇಪಾಳ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ನೇಪಾಳಕ್ಕೆ ಆಮದು ಆಗಿ ತೆರಿಗೆ ಸೇರಿದಂತೆ ಭಾರತಕ್ಕೆ ಮತ್ತೆ ಸಾಗಾಟವಾಗುವ ವೇಳೆಗೆ ಬಹುಪಾಲು ಭಾರತದ ಅಡಿಕೆ ಮಾರುಕಟ್ಟೆಯ ಈಗಿನ ಧಾರಣೆಯೇ ಆಗಿರುತ್ತದೆ. ಹೀಗಾಗಿ ಅಡಿಕೆ ಧಾರಣೆ ಮುಂದೆ ಭಾರೀ ಏರಿಕೆಯ ನಿರೀಕ್ಷೆ ಸದ್ಯಕ್ಕೆ ಕಷ್ಟ ಸಾಧ್ಯವೇ ಎಂಬುದು ಮಾರುಕಟ್ಟೆ ವಲಯದ ಅಭಿಪ್ರಾಯ. ಆದರೆ ಈಗಿನ ಅಡಿಕೆ ಮಾರುಕಟ್ಟೆ, ಧಾರಣೆಯ ಮೇಲೆ ಸದ್ಯ ಯಾವುದೇ ಪರಿಣಾಮ ಬೀರಲಾರದು ಎನ್ನುವುದು  ಈಗಿನ ಅಂದಾಜು. ಮಾರುಕಟ್ಟೆ ಕುಸಿತವಾಗದಂತೆ ಈಗಾಗಲೇ ಸಾಕಷ್ಟು ಎಚ್ಚರಿಕೆಗಳನ್ನು ಸರ್ಕಾರವೂ ಕೈಗೊಂಡಿದೆ. ಭಾರತದೊಳಗ್ಗೆ ಅಸ್ಸಾಂ ಗಡಿಯ ಮೂಲಕ ಅಕ್ರಮವಾಗಿ ಅಡಿಕೆ ಆಮದಾಗುತ್ತಿರುವುದು ಬಹುಪಾಲು ಕಡಿಮೆಯಾಗಿದ್ದು, ಇನ್ನೀಗ ಅಧಿಕೃತವಾಗಿ ನೇಪಾಳದ ಮೂಲಕ ಭಾರತದೊಳಕ್ಕೆ ಬರುವ ಅಡಿಕೆಯ ಬಗ್ಗೆ ಮಾತ್ರಾ ಹೆಚ್ಚು ನಿಗಾ ಇಡಬೇಕಾಗಿದೆ ಎನ್ನುವುದು ಮಾರುಕಟ್ಟೆ ತಜ್ಞರ ಅಭಿಪ್ರಾಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 day ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago