MIRROR FOCUS

ಭೂತಾನ್‌ ಅಡಿಕೆ ಆಮದು | ಹಸಿ ಅಡಿಕೆ ಆಮದು ಬಿಗಿ ಕ್ರಮಕ್ಕೆ ಸೂಚನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂತಾನ್‌ನಿಂದ ಅಡಿಕೆ(Arecanut) ಆಮದು ಮಾಡುವ ವೇಳೆ ಬಿಗಿಯಾದ ಕ್ರಮ ಕೈಗೊಳ್ಳಲು ಹಾಗೂ ಸರಿಯಾದ ಮಾರ್ಗಸೂಚಿ ಅನುಸರಿಸಲು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ(CBIC) ಕೋಲ್ಕತ್ತಾ ಕಸ್ಟಮ್ಸ್ ವಲಯಕ್ಕೆ ನಿರ್ದೇಶನ ನೀಡಿದೆ.

Advertisement

ಆಮದು ನೀತಿಯ ಪ್ರಕಾರ ಇದುವರೆಗೆ ಹಸಿ ಅಡಿಕೆ ಆಮದು ಅವಕಾಶ ಇರಲಿಲ್ಲ. ಆದರೆ ವಿಶೇಷ ಸೂಚನೆಯಂತೆ ಈಗ ಹಸಿರು ಅಡಿಕೆಗೆ ಆಮದು ನೀತಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಕೆಲವು ನಿಯಮಗಳಲ್ಲಿ ಬದಲಾವಣೆ ಹಾಗೂ ಕಟ್ಟುನಿಟ್ಟಿನ  ಕೆಲವು  ಅಗತ್ಯ ಕ್ರಮಗಳು ಬೇಕಾಗಿದೆ ಎಂದು ಕೇಂದ್ರೀಯ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ಹೇಳಿದೆ.

ಆದೇಶದ ಪ್ರತಿ

ಆಮದು ನೋಂದಣಿ ಪ್ರಮಾಣಪತ್ರಗಳ ನೋಂದಣಿ ಹಾಗೂ ಆಮದು ಮತ್ತು ರಫ್ತು ಪ್ರಮಾಣದ ಮಾನ್ಯತೆ , ಮೇಲ್ವಿಚಾರಣೆ ಮಾಡಲು ಸೂಕ್ತವಾದ ಕಾರ್ಯವಿಧಾನವೂ ಅಗತ್ಯವಿದೆ. ಇದರ ಜೊತೆಗೆ ಈ ವರ್ಷ ಕನಿಷ್ಟ ಆಮದು ಬೆಲೆ(MIP) 251 ರೂಪಾಯಿ  ಮಾನದಂಡ ಇಲ್ಲದೆಯೇ ಅಡಿಕೆ ಆಮದು ಆಗುತ್ತದೆ, ಆದರೆ ಇಲ್ಲಿ ಹಸಿ ಅಡಿಕೆ ಮಾತ್ರವೇ ಆಮದು ಆಗಬೇಕು. ಅದರ ಜೊತೆಗೆ ಭೂತಾನ್‌ ದೇಶದಿಂದ ಮಾತ್ರವೇ ಒಂದು ಬಂದರಿನ ಮೂಲಕವೇ 17000 ಟನ್‌ ಹಸಿಅಡಿಕೆ  ಆಮದು ಆಗಬೇಕು. 2022-23 ರಲ್ಲಿ 8500 ಟನ್‌ ಹಾಗೂ 2023-24 ರ ನಂತರ 17000 ಟನ್‌ ಆಮದು ಮಾಡಲು ಡಿಜಿಎಫ್‌ಟಿ ಅನುಮತಿ ನೀಡಿದೆ. ಹೀಗಾಗಿ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಾಗಬೇಕು  ಎಂದು ಕೋಲ್ಕತ್ತಾ ಕಸ್ಟಮ್ಸ್‌ ವಲಯಕ್ಕೆ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ನಿರ್ದೇಶನ ನೀಡಿದೆ.ಉಳಿದಂತೆ ಡಿಜಿಎಫ್‌ಟಿ ನಿಯಮಗಳು ಪಾಲನೆಯಾಗಬೇಕು ಎಂದು ಹೇಳಿದೆ.

ಈಗಿನ ಆಮದು ನೀತಿ ಪ್ರಕಾರ ಹಾಗೂ ಅಡಿಕೆ ಆಮದು ಶರ್ತಗಳ ಪ್ರಕಾರ ಹಸಿ ಅಡಿಕೆ ನಿಷೇಧಿತ ವಸ್ತುವಾಗಿದೆ ಎಂಬ ಅಂಶದ ಹಿನ್ನೆಲೆಯಲ್ಲಿ  ಪರಿಷ್ಕೃತ ನೀತಿ ನಿಬಂಧನೆಗಳ ಪರಿಣಾಮಕಾರಿ ಅನುಷ್ಠಾನ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

 

ಸೆ.28 ರಂದು ಆಮದು ಅಧಿಸೂಚನೆ ಹೊರಡಿಸಲಾಗಿತ್ತು. ಕನಿಷ್ಟ ಆಮದು ಬೆಲೆ ಇಲ್ಲದೆಯೇ ಭೂತಾನ್‌ನಿಂದ 17000 ಟನ್‌ ಹಸಿ ಅಡಿಕೆ ಆಮದು ಮಾಡಿಕೊಳ್ಳಲು DGFT  ಅನುಮತಿ ನೀಡಿತ್ತು ಹಾಗೂ ಅದಕ್ಕೆ ಅಗತ್ಯವಾದ ಕಾರ್ಯಸೂಚಿ, ಅರ್ಜಿ, ನೋಂದಣಿ ಹಾಗೂ ಆಮದು ನಿಯಮಗಳ ಬಗ್ಗೆ ಹೇಳಿತ್ತು. ಆದರೆ ಹಸಿ ಅಡಿಕೆ ಆಮದಿಗೆ ಕೆಲವು ನೀತಿಗಳಲ್ಲಿ ಬದಲಾವಣೆ ಅಗತ್ಯವಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

20 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

20 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

20 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

1 day ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

2 days ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

2 days ago