Advertisement
MIRROR FOCUS

ಭೂತಾನ್‌ ಅಡಿಕೆ ಆಮದು | ಹಸಿ ಅಡಿಕೆ ಆಮದು ಬಿಗಿ ಕ್ರಮಕ್ಕೆ ಸೂಚನೆ |

Share

ಭೂತಾನ್‌ನಿಂದ ಅಡಿಕೆ(Arecanut) ಆಮದು ಮಾಡುವ ವೇಳೆ ಬಿಗಿಯಾದ ಕ್ರಮ ಕೈಗೊಳ್ಳಲು ಹಾಗೂ ಸರಿಯಾದ ಮಾರ್ಗಸೂಚಿ ಅನುಸರಿಸಲು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ(CBIC) ಕೋಲ್ಕತ್ತಾ ಕಸ್ಟಮ್ಸ್ ವಲಯಕ್ಕೆ ನಿರ್ದೇಶನ ನೀಡಿದೆ.

ಆಮದು ನೀತಿಯ ಪ್ರಕಾರ ಇದುವರೆಗೆ ಹಸಿ ಅಡಿಕೆ ಆಮದು ಅವಕಾಶ ಇರಲಿಲ್ಲ. ಆದರೆ ವಿಶೇಷ ಸೂಚನೆಯಂತೆ ಈಗ ಹಸಿರು ಅಡಿಕೆಗೆ ಆಮದು ನೀತಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಕೆಲವು ನಿಯಮಗಳಲ್ಲಿ ಬದಲಾವಣೆ ಹಾಗೂ ಕಟ್ಟುನಿಟ್ಟಿನ  ಕೆಲವು  ಅಗತ್ಯ ಕ್ರಮಗಳು ಬೇಕಾಗಿದೆ ಎಂದು ಕೇಂದ್ರೀಯ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ಹೇಳಿದೆ.

ಆದೇಶದ ಪ್ರತಿ

ಆಮದು ನೋಂದಣಿ ಪ್ರಮಾಣಪತ್ರಗಳ ನೋಂದಣಿ ಹಾಗೂ ಆಮದು ಮತ್ತು ರಫ್ತು ಪ್ರಮಾಣದ ಮಾನ್ಯತೆ , ಮೇಲ್ವಿಚಾರಣೆ ಮಾಡಲು ಸೂಕ್ತವಾದ ಕಾರ್ಯವಿಧಾನವೂ ಅಗತ್ಯವಿದೆ. ಇದರ ಜೊತೆಗೆ ಈ ವರ್ಷ ಕನಿಷ್ಟ ಆಮದು ಬೆಲೆ(MIP) 251 ರೂಪಾಯಿ  ಮಾನದಂಡ ಇಲ್ಲದೆಯೇ ಅಡಿಕೆ ಆಮದು ಆಗುತ್ತದೆ, ಆದರೆ ಇಲ್ಲಿ ಹಸಿ ಅಡಿಕೆ ಮಾತ್ರವೇ ಆಮದು ಆಗಬೇಕು. ಅದರ ಜೊತೆಗೆ ಭೂತಾನ್‌ ದೇಶದಿಂದ ಮಾತ್ರವೇ ಒಂದು ಬಂದರಿನ ಮೂಲಕವೇ 17000 ಟನ್‌ ಹಸಿಅಡಿಕೆ  ಆಮದು ಆಗಬೇಕು. 2022-23 ರಲ್ಲಿ 8500 ಟನ್‌ ಹಾಗೂ 2023-24 ರ ನಂತರ 17000 ಟನ್‌ ಆಮದು ಮಾಡಲು ಡಿಜಿಎಫ್‌ಟಿ ಅನುಮತಿ ನೀಡಿದೆ. ಹೀಗಾಗಿ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಾಗಬೇಕು  ಎಂದು ಕೋಲ್ಕತ್ತಾ ಕಸ್ಟಮ್ಸ್‌ ವಲಯಕ್ಕೆ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ನಿರ್ದೇಶನ ನೀಡಿದೆ.ಉಳಿದಂತೆ ಡಿಜಿಎಫ್‌ಟಿ ನಿಯಮಗಳು ಪಾಲನೆಯಾಗಬೇಕು ಎಂದು ಹೇಳಿದೆ.

ಈಗಿನ ಆಮದು ನೀತಿ ಪ್ರಕಾರ ಹಾಗೂ ಅಡಿಕೆ ಆಮದು ಶರ್ತಗಳ ಪ್ರಕಾರ ಹಸಿ ಅಡಿಕೆ ನಿಷೇಧಿತ ವಸ್ತುವಾಗಿದೆ ಎಂಬ ಅಂಶದ ಹಿನ್ನೆಲೆಯಲ್ಲಿ  ಪರಿಷ್ಕೃತ ನೀತಿ ನಿಬಂಧನೆಗಳ ಪರಿಣಾಮಕಾರಿ ಅನುಷ್ಠಾನ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

 

ಸೆ.28 ರಂದು ಆಮದು ಅಧಿಸೂಚನೆ ಹೊರಡಿಸಲಾಗಿತ್ತು. ಕನಿಷ್ಟ ಆಮದು ಬೆಲೆ ಇಲ್ಲದೆಯೇ ಭೂತಾನ್‌ನಿಂದ 17000 ಟನ್‌ ಹಸಿ ಅಡಿಕೆ ಆಮದು ಮಾಡಿಕೊಳ್ಳಲು DGFT  ಅನುಮತಿ ನೀಡಿತ್ತು ಹಾಗೂ ಅದಕ್ಕೆ ಅಗತ್ಯವಾದ ಕಾರ್ಯಸೂಚಿ, ಅರ್ಜಿ, ನೋಂದಣಿ ಹಾಗೂ ಆಮದು ನಿಯಮಗಳ ಬಗ್ಗೆ ಹೇಳಿತ್ತು. ಆದರೆ ಹಸಿ ಅಡಿಕೆ ಆಮದಿಗೆ ಕೆಲವು ನೀತಿಗಳಲ್ಲಿ ಬದಲಾವಣೆ ಅಗತ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

12 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

12 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

21 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

22 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

22 hours ago