Advertisement
MIRROR FOCUS

ಭೂತಾನ್‌ ಅಡಿಕೆ ಆಮದು | ಹಸಿ ಅಡಿಕೆ ಆಮದು ಬಿಗಿ ಕ್ರಮಕ್ಕೆ ಸೂಚನೆ |

Share

ಭೂತಾನ್‌ನಿಂದ ಅಡಿಕೆ(Arecanut) ಆಮದು ಮಾಡುವ ವೇಳೆ ಬಿಗಿಯಾದ ಕ್ರಮ ಕೈಗೊಳ್ಳಲು ಹಾಗೂ ಸರಿಯಾದ ಮಾರ್ಗಸೂಚಿ ಅನುಸರಿಸಲು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ(CBIC) ಕೋಲ್ಕತ್ತಾ ಕಸ್ಟಮ್ಸ್ ವಲಯಕ್ಕೆ ನಿರ್ದೇಶನ ನೀಡಿದೆ.

ಆಮದು ನೀತಿಯ ಪ್ರಕಾರ ಇದುವರೆಗೆ ಹಸಿ ಅಡಿಕೆ ಆಮದು ಅವಕಾಶ ಇರಲಿಲ್ಲ. ಆದರೆ ವಿಶೇಷ ಸೂಚನೆಯಂತೆ ಈಗ ಹಸಿರು ಅಡಿಕೆಗೆ ಆಮದು ನೀತಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಕೆಲವು ನಿಯಮಗಳಲ್ಲಿ ಬದಲಾವಣೆ ಹಾಗೂ ಕಟ್ಟುನಿಟ್ಟಿನ  ಕೆಲವು  ಅಗತ್ಯ ಕ್ರಮಗಳು ಬೇಕಾಗಿದೆ ಎಂದು ಕೇಂದ್ರೀಯ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ಹೇಳಿದೆ.

ಆದೇಶದ ಪ್ರತಿ

ಆಮದು ನೋಂದಣಿ ಪ್ರಮಾಣಪತ್ರಗಳ ನೋಂದಣಿ ಹಾಗೂ ಆಮದು ಮತ್ತು ರಫ್ತು ಪ್ರಮಾಣದ ಮಾನ್ಯತೆ , ಮೇಲ್ವಿಚಾರಣೆ ಮಾಡಲು ಸೂಕ್ತವಾದ ಕಾರ್ಯವಿಧಾನವೂ ಅಗತ್ಯವಿದೆ. ಇದರ ಜೊತೆಗೆ ಈ ವರ್ಷ ಕನಿಷ್ಟ ಆಮದು ಬೆಲೆ(MIP) 251 ರೂಪಾಯಿ  ಮಾನದಂಡ ಇಲ್ಲದೆಯೇ ಅಡಿಕೆ ಆಮದು ಆಗುತ್ತದೆ, ಆದರೆ ಇಲ್ಲಿ ಹಸಿ ಅಡಿಕೆ ಮಾತ್ರವೇ ಆಮದು ಆಗಬೇಕು. ಅದರ ಜೊತೆಗೆ ಭೂತಾನ್‌ ದೇಶದಿಂದ ಮಾತ್ರವೇ ಒಂದು ಬಂದರಿನ ಮೂಲಕವೇ 17000 ಟನ್‌ ಹಸಿಅಡಿಕೆ  ಆಮದು ಆಗಬೇಕು. 2022-23 ರಲ್ಲಿ 8500 ಟನ್‌ ಹಾಗೂ 2023-24 ರ ನಂತರ 17000 ಟನ್‌ ಆಮದು ಮಾಡಲು ಡಿಜಿಎಫ್‌ಟಿ ಅನುಮತಿ ನೀಡಿದೆ. ಹೀಗಾಗಿ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಾಗಬೇಕು  ಎಂದು ಕೋಲ್ಕತ್ತಾ ಕಸ್ಟಮ್ಸ್‌ ವಲಯಕ್ಕೆ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ನಿರ್ದೇಶನ ನೀಡಿದೆ.ಉಳಿದಂತೆ ಡಿಜಿಎಫ್‌ಟಿ ನಿಯಮಗಳು ಪಾಲನೆಯಾಗಬೇಕು ಎಂದು ಹೇಳಿದೆ.

ಈಗಿನ ಆಮದು ನೀತಿ ಪ್ರಕಾರ ಹಾಗೂ ಅಡಿಕೆ ಆಮದು ಶರ್ತಗಳ ಪ್ರಕಾರ ಹಸಿ ಅಡಿಕೆ ನಿಷೇಧಿತ ವಸ್ತುವಾಗಿದೆ ಎಂಬ ಅಂಶದ ಹಿನ್ನೆಲೆಯಲ್ಲಿ  ಪರಿಷ್ಕೃತ ನೀತಿ ನಿಬಂಧನೆಗಳ ಪರಿಣಾಮಕಾರಿ ಅನುಷ್ಠಾನ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

 

ಸೆ.28 ರಂದು ಆಮದು ಅಧಿಸೂಚನೆ ಹೊರಡಿಸಲಾಗಿತ್ತು. ಕನಿಷ್ಟ ಆಮದು ಬೆಲೆ ಇಲ್ಲದೆಯೇ ಭೂತಾನ್‌ನಿಂದ 17000 ಟನ್‌ ಹಸಿ ಅಡಿಕೆ ಆಮದು ಮಾಡಿಕೊಳ್ಳಲು DGFT  ಅನುಮತಿ ನೀಡಿತ್ತು ಹಾಗೂ ಅದಕ್ಕೆ ಅಗತ್ಯವಾದ ಕಾರ್ಯಸೂಚಿ, ಅರ್ಜಿ, ನೋಂದಣಿ ಹಾಗೂ ಆಮದು ನಿಯಮಗಳ ಬಗ್ಗೆ ಹೇಳಿತ್ತು. ಆದರೆ ಹಸಿ ಅಡಿಕೆ ಆಮದಿಗೆ ಕೆಲವು ನೀತಿಗಳಲ್ಲಿ ಬದಲಾವಣೆ ಅಗತ್ಯವಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

8 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

13 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago