Advertisement
MIRROR FOCUS

ಭೂತಾನ್‌ ಅಡಿಕೆ ಆಮದು | ಹಸಿ ಅಡಿಕೆ ಆಮದು ಬಿಗಿ ಕ್ರಮಕ್ಕೆ ಸೂಚನೆ |

Share

ಭೂತಾನ್‌ನಿಂದ ಅಡಿಕೆ(Arecanut) ಆಮದು ಮಾಡುವ ವೇಳೆ ಬಿಗಿಯಾದ ಕ್ರಮ ಕೈಗೊಳ್ಳಲು ಹಾಗೂ ಸರಿಯಾದ ಮಾರ್ಗಸೂಚಿ ಅನುಸರಿಸಲು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ(CBIC) ಕೋಲ್ಕತ್ತಾ ಕಸ್ಟಮ್ಸ್ ವಲಯಕ್ಕೆ ನಿರ್ದೇಶನ ನೀಡಿದೆ.

Advertisement

ಆಮದು ನೀತಿಯ ಪ್ರಕಾರ ಇದುವರೆಗೆ ಹಸಿ ಅಡಿಕೆ ಆಮದು ಅವಕಾಶ ಇರಲಿಲ್ಲ. ಆದರೆ ವಿಶೇಷ ಸೂಚನೆಯಂತೆ ಈಗ ಹಸಿರು ಅಡಿಕೆಗೆ ಆಮದು ನೀತಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಕೆಲವು ನಿಯಮಗಳಲ್ಲಿ ಬದಲಾವಣೆ ಹಾಗೂ ಕಟ್ಟುನಿಟ್ಟಿನ  ಕೆಲವು  ಅಗತ್ಯ ಕ್ರಮಗಳು ಬೇಕಾಗಿದೆ ಎಂದು ಕೇಂದ್ರೀಯ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ಹೇಳಿದೆ.

ಆದೇಶದ ಪ್ರತಿ

ಆಮದು ನೋಂದಣಿ ಪ್ರಮಾಣಪತ್ರಗಳ ನೋಂದಣಿ ಹಾಗೂ ಆಮದು ಮತ್ತು ರಫ್ತು ಪ್ರಮಾಣದ ಮಾನ್ಯತೆ , ಮೇಲ್ವಿಚಾರಣೆ ಮಾಡಲು ಸೂಕ್ತವಾದ ಕಾರ್ಯವಿಧಾನವೂ ಅಗತ್ಯವಿದೆ. ಇದರ ಜೊತೆಗೆ ಈ ವರ್ಷ ಕನಿಷ್ಟ ಆಮದು ಬೆಲೆ(MIP) 251 ರೂಪಾಯಿ  ಮಾನದಂಡ ಇಲ್ಲದೆಯೇ ಅಡಿಕೆ ಆಮದು ಆಗುತ್ತದೆ, ಆದರೆ ಇಲ್ಲಿ ಹಸಿ ಅಡಿಕೆ ಮಾತ್ರವೇ ಆಮದು ಆಗಬೇಕು. ಅದರ ಜೊತೆಗೆ ಭೂತಾನ್‌ ದೇಶದಿಂದ ಮಾತ್ರವೇ ಒಂದು ಬಂದರಿನ ಮೂಲಕವೇ 17000 ಟನ್‌ ಹಸಿಅಡಿಕೆ  ಆಮದು ಆಗಬೇಕು. 2022-23 ರಲ್ಲಿ 8500 ಟನ್‌ ಹಾಗೂ 2023-24 ರ ನಂತರ 17000 ಟನ್‌ ಆಮದು ಮಾಡಲು ಡಿಜಿಎಫ್‌ಟಿ ಅನುಮತಿ ನೀಡಿದೆ. ಹೀಗಾಗಿ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಾಗಬೇಕು  ಎಂದು ಕೋಲ್ಕತ್ತಾ ಕಸ್ಟಮ್ಸ್‌ ವಲಯಕ್ಕೆ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ನಿರ್ದೇಶನ ನೀಡಿದೆ.ಉಳಿದಂತೆ ಡಿಜಿಎಫ್‌ಟಿ ನಿಯಮಗಳು ಪಾಲನೆಯಾಗಬೇಕು ಎಂದು ಹೇಳಿದೆ.

ಈಗಿನ ಆಮದು ನೀತಿ ಪ್ರಕಾರ ಹಾಗೂ ಅಡಿಕೆ ಆಮದು ಶರ್ತಗಳ ಪ್ರಕಾರ ಹಸಿ ಅಡಿಕೆ ನಿಷೇಧಿತ ವಸ್ತುವಾಗಿದೆ ಎಂಬ ಅಂಶದ ಹಿನ್ನೆಲೆಯಲ್ಲಿ  ಪರಿಷ್ಕೃತ ನೀತಿ ನಿಬಂಧನೆಗಳ ಪರಿಣಾಮಕಾರಿ ಅನುಷ್ಠಾನ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

 

ಸೆ.28 ರಂದು ಆಮದು ಅಧಿಸೂಚನೆ ಹೊರಡಿಸಲಾಗಿತ್ತು. ಕನಿಷ್ಟ ಆಮದು ಬೆಲೆ ಇಲ್ಲದೆಯೇ ಭೂತಾನ್‌ನಿಂದ 17000 ಟನ್‌ ಹಸಿ ಅಡಿಕೆ ಆಮದು ಮಾಡಿಕೊಳ್ಳಲು DGFT  ಅನುಮತಿ ನೀಡಿತ್ತು ಹಾಗೂ ಅದಕ್ಕೆ ಅಗತ್ಯವಾದ ಕಾರ್ಯಸೂಚಿ, ಅರ್ಜಿ, ನೋಂದಣಿ ಹಾಗೂ ಆಮದು ನಿಯಮಗಳ ಬಗ್ಗೆ ಹೇಳಿತ್ತು. ಆದರೆ ಹಸಿ ಅಡಿಕೆ ಆಮದಿಗೆ ಕೆಲವು ನೀತಿಗಳಲ್ಲಿ ಬದಲಾವಣೆ ಅಗತ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

13 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago