Advertisement
MIRROR FOCUS

ಭೂತಾನ್‌ ಅಡಿಕೆ ಆಮದು | ಹಸಿ ಅಡಿಕೆ ಆಮದು ಬಿಗಿ ಕ್ರಮಕ್ಕೆ ಸೂಚನೆ |

Share

ಭೂತಾನ್‌ನಿಂದ ಅಡಿಕೆ(Arecanut) ಆಮದು ಮಾಡುವ ವೇಳೆ ಬಿಗಿಯಾದ ಕ್ರಮ ಕೈಗೊಳ್ಳಲು ಹಾಗೂ ಸರಿಯಾದ ಮಾರ್ಗಸೂಚಿ ಅನುಸರಿಸಲು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ(CBIC) ಕೋಲ್ಕತ್ತಾ ಕಸ್ಟಮ್ಸ್ ವಲಯಕ್ಕೆ ನಿರ್ದೇಶನ ನೀಡಿದೆ.

ಆಮದು ನೀತಿಯ ಪ್ರಕಾರ ಇದುವರೆಗೆ ಹಸಿ ಅಡಿಕೆ ಆಮದು ಅವಕಾಶ ಇರಲಿಲ್ಲ. ಆದರೆ ವಿಶೇಷ ಸೂಚನೆಯಂತೆ ಈಗ ಹಸಿರು ಅಡಿಕೆಗೆ ಆಮದು ನೀತಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಕೆಲವು ನಿಯಮಗಳಲ್ಲಿ ಬದಲಾವಣೆ ಹಾಗೂ ಕಟ್ಟುನಿಟ್ಟಿನ  ಕೆಲವು  ಅಗತ್ಯ ಕ್ರಮಗಳು ಬೇಕಾಗಿದೆ ಎಂದು ಕೇಂದ್ರೀಯ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ಹೇಳಿದೆ.

Advertisement
ಆದೇಶದ ಪ್ರತಿ

ಆಮದು ನೋಂದಣಿ ಪ್ರಮಾಣಪತ್ರಗಳ ನೋಂದಣಿ ಹಾಗೂ ಆಮದು ಮತ್ತು ರಫ್ತು ಪ್ರಮಾಣದ ಮಾನ್ಯತೆ , ಮೇಲ್ವಿಚಾರಣೆ ಮಾಡಲು ಸೂಕ್ತವಾದ ಕಾರ್ಯವಿಧಾನವೂ ಅಗತ್ಯವಿದೆ. ಇದರ ಜೊತೆಗೆ ಈ ವರ್ಷ ಕನಿಷ್ಟ ಆಮದು ಬೆಲೆ(MIP) 251 ರೂಪಾಯಿ  ಮಾನದಂಡ ಇಲ್ಲದೆಯೇ ಅಡಿಕೆ ಆಮದು ಆಗುತ್ತದೆ, ಆದರೆ ಇಲ್ಲಿ ಹಸಿ ಅಡಿಕೆ ಮಾತ್ರವೇ ಆಮದು ಆಗಬೇಕು. ಅದರ ಜೊತೆಗೆ ಭೂತಾನ್‌ ದೇಶದಿಂದ ಮಾತ್ರವೇ ಒಂದು ಬಂದರಿನ ಮೂಲಕವೇ 17000 ಟನ್‌ ಹಸಿಅಡಿಕೆ  ಆಮದು ಆಗಬೇಕು. 2022-23 ರಲ್ಲಿ 8500 ಟನ್‌ ಹಾಗೂ 2023-24 ರ ನಂತರ 17000 ಟನ್‌ ಆಮದು ಮಾಡಲು ಡಿಜಿಎಫ್‌ಟಿ ಅನುಮತಿ ನೀಡಿದೆ. ಹೀಗಾಗಿ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಾಗಬೇಕು  ಎಂದು ಕೋಲ್ಕತ್ತಾ ಕಸ್ಟಮ್ಸ್‌ ವಲಯಕ್ಕೆ ಕೇಂದ್ರೀಯ  ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ನಿರ್ದೇಶನ ನೀಡಿದೆ.ಉಳಿದಂತೆ ಡಿಜಿಎಫ್‌ಟಿ ನಿಯಮಗಳು ಪಾಲನೆಯಾಗಬೇಕು ಎಂದು ಹೇಳಿದೆ.

ಈಗಿನ ಆಮದು ನೀತಿ ಪ್ರಕಾರ ಹಾಗೂ ಅಡಿಕೆ ಆಮದು ಶರ್ತಗಳ ಪ್ರಕಾರ ಹಸಿ ಅಡಿಕೆ ನಿಷೇಧಿತ ವಸ್ತುವಾಗಿದೆ ಎಂಬ ಅಂಶದ ಹಿನ್ನೆಲೆಯಲ್ಲಿ  ಪರಿಷ್ಕೃತ ನೀತಿ ನಿಬಂಧನೆಗಳ ಪರಿಣಾಮಕಾರಿ ಅನುಷ್ಠಾನ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

Advertisement

 

Advertisement

ಸೆ.28 ರಂದು ಆಮದು ಅಧಿಸೂಚನೆ ಹೊರಡಿಸಲಾಗಿತ್ತು. ಕನಿಷ್ಟ ಆಮದು ಬೆಲೆ ಇಲ್ಲದೆಯೇ ಭೂತಾನ್‌ನಿಂದ 17000 ಟನ್‌ ಹಸಿ ಅಡಿಕೆ ಆಮದು ಮಾಡಿಕೊಳ್ಳಲು DGFT  ಅನುಮತಿ ನೀಡಿತ್ತು ಹಾಗೂ ಅದಕ್ಕೆ ಅಗತ್ಯವಾದ ಕಾರ್ಯಸೂಚಿ, ಅರ್ಜಿ, ನೋಂದಣಿ ಹಾಗೂ ಆಮದು ನಿಯಮಗಳ ಬಗ್ಗೆ ಹೇಳಿತ್ತು. ಆದರೆ ಹಸಿ ಅಡಿಕೆ ಆಮದಿಗೆ ಕೆಲವು ನೀತಿಗಳಲ್ಲಿ ಬದಲಾವಣೆ ಅಗತ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

58 minutes ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago