Advertisement
MIRROR FOCUS

ಅಡಿಕೆ ಆಮದು ದರ ಏರಿಕೆಗೆ ನಿರ್ಧಾರ | ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ | ಕ್ಯಾಂಪ್ಕೋ ಪ್ರಯತ್ನದಲ್ಲಿ ಯಶಸ್ಸು | ಧಾರಣೆ ಏರಿಕೆಯ ನಿರೀಕ್ಷೆ |

Share

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು. ಆಮದು ದರ 251 ರೂಪಾಯಿಯಿಂದ 351 ರೂಪಾಯಿಗೆ ಏರಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಆಮದು ಅಡಿಕೆ ದರ ಮುಂದೆ 351 ರೂಪಾಯಿ ನಿಗದಿಯಾಗಲಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಪರಿಣಾಮ ಬೀರಲಿದ್ದು. ದೇಶದ ಅಡಿಕೆ ಧಾರಣೆ ಏರಿಕೆ ಕಾಣುವ ನಿರೀಕ್ಷೆ ಇದೆ.

ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಈಚೆಗೆ  ಪುತ್ತೂರಿನಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲೂ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದ್ದರು. ಇದೀಗ ಕೇಂದ್ರದ ವಾಣಿಜ್ಯ ಇಲಾಖೆಯು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಮಂಗಳವಾರ ನೋಟಿಫೀಕೇಶನ್‌ ಹೊರಡಿಸಿದೆ. ಈ ಮೂಲಕ ವಿದೇಶಿ ಅಡಿಕೆ ಆಮದು ಮೇಲೆ ಕಡಿವಾಣ ಬೀಳುವ ನಿರೀಕ್ಷೆ ಇದೆ.

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯು ವಿವಿಧ ಕಾರಣಗಳಿಂದಾಗಿ ಇಳಿಕೆಯ ಹಾದಿಯಲ್ಲಿತ್ತು. ಇದೀಗ ಆಮದು ದರ ಏರಿಕೆಯ ನಂತರ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಾಣುವ ನಿರೀಕ್ಷೆ ಇದೆ. ಹೊಸ ಚಾಲಿ ಅಡಿಕೆ ಹಾಗೂ ಹಳೆ ಎರಡರಲ್ಲೂ ಧಾರಣೆ ಏರಿಕೆಯ ನಿರೀಕ್ಷೆ ಇದೆ.

ರೂರಲ್‌ ಮಿರರ್ ನಿರೀಕ್ಷೆಯ ವರದಿ :

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

7 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

17 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

21 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

21 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

21 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

21 hours ago