Advertisement
MIRROR FOCUS

ಅಡಿಕೆ ಆಮದು ದರ ಏರಿಕೆಗೆ ನಿರ್ಧಾರ | ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ | ಕ್ಯಾಂಪ್ಕೋ ಪ್ರಯತ್ನದಲ್ಲಿ ಯಶಸ್ಸು | ಧಾರಣೆ ಏರಿಕೆಯ ನಿರೀಕ್ಷೆ |

Share

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು. ಆಮದು ದರ 251 ರೂಪಾಯಿಯಿಂದ 351 ರೂಪಾಯಿಗೆ ಏರಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಆಮದು ಅಡಿಕೆ ದರ ಮುಂದೆ 351 ರೂಪಾಯಿ ನಿಗದಿಯಾಗಲಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಪರಿಣಾಮ ಬೀರಲಿದ್ದು. ದೇಶದ ಅಡಿಕೆ ಧಾರಣೆ ಏರಿಕೆ ಕಾಣುವ ನಿರೀಕ್ಷೆ ಇದೆ.

ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಈಚೆಗೆ  ಪುತ್ತೂರಿನಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲೂ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದ್ದರು. ಇದೀಗ ಕೇಂದ್ರದ ವಾಣಿಜ್ಯ ಇಲಾಖೆಯು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಮಂಗಳವಾರ ನೋಟಿಫೀಕೇಶನ್‌ ಹೊರಡಿಸಿದೆ. ಈ ಮೂಲಕ ವಿದೇಶಿ ಅಡಿಕೆ ಆಮದು ಮೇಲೆ ಕಡಿವಾಣ ಬೀಳುವ ನಿರೀಕ್ಷೆ ಇದೆ.

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯು ವಿವಿಧ ಕಾರಣಗಳಿಂದಾಗಿ ಇಳಿಕೆಯ ಹಾದಿಯಲ್ಲಿತ್ತು. ಇದೀಗ ಆಮದು ದರ ಏರಿಕೆಯ ನಂತರ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಾಣುವ ನಿರೀಕ್ಷೆ ಇದೆ. ಹೊಸ ಚಾಲಿ ಅಡಿಕೆ ಹಾಗೂ ಹಳೆ ಎರಡರಲ್ಲೂ ಧಾರಣೆ ಏರಿಕೆಯ ನಿರೀಕ್ಷೆ ಇದೆ.

ರೂರಲ್‌ ಮಿರರ್ ನಿರೀಕ್ಷೆಯ ವರದಿ :

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

20 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago