ಅಡಿಕೆಯ ಕನಿಷ್ಟ ಆಮದು ಬೆಲೆ ಹೆಚ್ಚಳಕ್ಕೆ ಮನವಿ | ದೆಹಲಿಗೆ ತೆರಳಿದ ನಿಯೋಗ |

August 17, 2022
9:24 PM

ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳ ಪ್ರಮುಖರನ್ನೊಳಗೊಂಡ ನಿಯೋಗ ದೆಹಲಿಗೆ ತೆರಳಿ ಅಡಿಕೆಯ ಕನಿಷ್ಟ ಆಮದು ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದೆ. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು.

ನಿಯೋಗವು ದೆಹಲಿಯಲ್ಲಿ ಕೆಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿಯವರನ್ನು ಭೇಟಿ ಮಾಡಿತು. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು. ಕೇಂದ್ರ ಸರ್ಕಾರವು 2017 ರಲ್ಲಿ ಕನಿಷ್ಟ  ಬೆಲೆಯನ್ನು ಕೆ.ಜಿಗೆ 251 ರೂಪಾಯಿಗೆ ನಿಗದಿಪಡಿಸಿತ್ತು.

ನಿಯೋಗದಲ್ಲಿ ಕ್ಯಾಂಪ್ಕೊಅಧ್ಯಕ್ಷರಾದ ಕಿಶೋರ್‌ ಕುಮಾರ್‌ ಕೊಡ್ಗಿ ಹಾಗೂ  ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಎಚ್ .ಎಂ .ಕೃಷ್ಣಕುಮಾರ್,  ಅಡಿಕೆ ಮಹಾಮಂಡಳದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ತುಮ್ಕೋಸ್ ಅಧ್ಯಕ್ಷರಾದ ಆರ್. ಎಮ್. ರವಿ, ಕ್ಯಾಂಪ್ಕೋ  ನಿರ್ದೇಶಕರು ಮತ್ತು ರಾಜ್ಯ ಸಹಕಾರ ಭಾರತಿಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಮಡ್ತಿಲ , ಟಿಎಸ್ಎಸ್ ನಿರ್ದೇಶಕರಾದ ಶಶಾಂಕ್ಎ ಸ್. ಹೆಗಡೆ ಹಾಗೂ ಮಹಾಮಂಡಳದ ನಿರ್ದೇಶಕ ಶಿವಕುಮಾರ್ ಅವರು ನಿಯೋಗದಲ್ಲಿ ಭಾಗವಹಿಸಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror